ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರದಲ್ಲಿ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ರನ್ನು ನೋಡಲು ಇಂದು ತಾಯಿ ಮೀನಾ ತೂಗುದೀಪ್ ಹಾಗೂ ಸಹೋದರ ದಿನಕರ್ ತೂಗುದೀಪ್ ಜೈಲಿಗೆ ಭೇಟಿ ನೀಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದ ಮೇಲೆ ನಟ ದರ್ಶನ್ ಕಳೆದ ಕೆಲ ದಿನಗಳಿಂದ ಜೈಲುಪಾಲಾಗಿದ್ದಾರೆ. ಜೈಲಿನಲ್ಲಿ ಭಾರೀ ಮುಗ್ದತೆಯಿಂದ ಇರುವ ಅವರಿಗೆ ತಮ್ಮ ತಾಯಿ ಹಾಗೂ ಸಹೋದರನ ನೆನಪು ಕಾಡುತ್ತಿತ್ತು.
ಈ ಹಿನ್ನೆಲೆಯಲ್ಲಿ ತಮ್ಮ ಭೇಟಿಗೆ ತಾಯಿ ಹಾಗೂ ಸಹೋದರ ಬಂದರೆ ಮಾತ್ರ ಅವಕಾಶ ಕಲ್ಪಿಸಿಕೊಡಿ ಎಂದು ಜೈಲು ಅಧಿಕಾರಿಗಳ ಬಳಿ ದರ್ಶನ್ ಮನವಿ ಮಾಡಿದ್ದರು. ಸ್ಟೇಷನ್ನಲ್ಲಿದ್ದಾಗ ಮನೆಯವರಿಂದ ಅಂತರ ಕಾಯ್ದುಕೊಂಡಿದ್ದ ದರ್ಶನ್ನನ್ನು ನೋಡಲು ತಾಯಿ ಹಾಗೂ ತಮ್ಮ ಬಂದಿರಲಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ತಾಯಿ ಮೀನಾ ತೂಗುದೀಪ್ ಹಾಗೂ ಸಹೋದರ ದಿನಕರ್ ತೂಗುದೀಪ್ ಹಾಗೂ ಪತ್ನಿ ವಿಜಯಲಕ್ಷ್ಮೀ ಅವರು ಜೈಲಿಗೆ ಭೇಟಿ ನೀಡಿ, ದರ್ಶನ್ಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ನಟ ದರ್ಶನ್ ತಾಯಿ ಹಾಗೂ ಸಹೋದರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಪತ್ನಿ ವಿಜಯಲಕ್ಷ್ಮೀ ಕೂಡ ದರ್ಶನ್ರನ್ನು ನೋಡಿ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…