ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ರನ್ನು ನಟಿ ರಚಿತಾ ರಾಮ್ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಒಂದೂವರೆ ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ರನ್ನು ಇಂದು ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಭೇಟಿ ಮಾಡಿ ಧೈರ್ಯ ಹೇಳಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಟಿ ರಚಿತಾ ರಾಮ್ ಅವರು, ದರ್ಶನ್ ಸರ್ ಆರೋಗ್ಯವಾಗಿದ್ದಾರೆ. ಜೈಲಿನಲ್ಲಿ ಅವರನ್ನು ನೋಡಲು ಕಷ್ಟ ಆಗುತ್ತಿದೆ. ಎಲ್ಲಾ ನಟ-ನಟಿಯರು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಾವೆಲ್ಲರೂ ಅವರ ಬರುವಿಕೆಗಾಗಿ ಕಾಯುತ್ತಿದ್ದೇವೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದೆ. ದರ್ಶನ್ ಸರ್ ಆದಷ್ಟು ಬೇಗ ಹೊರ ಬರುತ್ತಾರೆ. ಈ ಬಗ್ಗೆ ನನಗೆ ನಂಬಿಕೆ ಇದೆ ಎಂದರು.
ಇನ್ನು ರಾಜನನ್ನು ರಾಜನ ಥರಾನೇ ನನಗೆ ನೋಡೋಕೆ ಇಷ್ಟ. ಇಂದು ಅವರನ್ನು ನೋಡಿ ನಿರಾಳವಾಯ್ತು ಎಂದು ಭಾವುಕರಾಗಿದ್ದಾರೆ. ನಾನು ಯಾವಾಗಲು ಅವರ ಕುಟುಂಬಕ್ಕೆ ಆಭಾರಿಯಾಗಿರುತ್ತೇನೆ. ಅವರನ್ನು ನೋಡಿ ನಾನೇ ಕಣ್ಣೀರಿಟ್ಟೆ. ಅವರೇ ನನಗೆ ದರ್ಶನ್ ಸರ್ ಸಮಾಧಾನ ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.