ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ರನ್ನು ನಟಿ ರಚಿತಾ ರಾಮ್ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಒಂದೂವರೆ ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ರನ್ನು ಇಂದು ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಭೇಟಿ ಮಾಡಿ ಧೈರ್ಯ ಹೇಳಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಟಿ ರಚಿತಾ ರಾಮ್ ಅವರು, ದರ್ಶನ್ ಸರ್ ಆರೋಗ್ಯವಾಗಿದ್ದಾರೆ. ಜೈಲಿನಲ್ಲಿ ಅವರನ್ನು ನೋಡಲು ಕಷ್ಟ ಆಗುತ್ತಿದೆ. ಎಲ್ಲಾ ನಟ-ನಟಿಯರು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಾವೆಲ್ಲರೂ ಅವರ ಬರುವಿಕೆಗಾಗಿ ಕಾಯುತ್ತಿದ್ದೇವೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದೆ. ದರ್ಶನ್ ಸರ್ ಆದಷ್ಟು ಬೇಗ ಹೊರ ಬರುತ್ತಾರೆ. ಈ ಬಗ್ಗೆ ನನಗೆ ನಂಬಿಕೆ ಇದೆ ಎಂದರು.
ಇನ್ನು ರಾಜನನ್ನು ರಾಜನ ಥರಾನೇ ನನಗೆ ನೋಡೋಕೆ ಇಷ್ಟ. ಇಂದು ಅವರನ್ನು ನೋಡಿ ನಿರಾಳವಾಯ್ತು ಎಂದು ಭಾವುಕರಾಗಿದ್ದಾರೆ. ನಾನು ಯಾವಾಗಲು ಅವರ ಕುಟುಂಬಕ್ಕೆ ಆಭಾರಿಯಾಗಿರುತ್ತೇನೆ. ಅವರನ್ನು ನೋಡಿ ನಾನೇ ಕಣ್ಣೀರಿಟ್ಟೆ. ಅವರೇ ನನಗೆ ದರ್ಶನ್ ಸರ್ ಸಮಾಧಾನ ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…
ಹೊಸದಿಲ್ಲಿ : ಕಳೆದ ಡಿಸೆಂಬರ್ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…