ಮನರಂಜನೆ

‘ಹೇರಾ ಫೇರಿ 3’ ಚಿತ್ರದಿಂದ ಹೊರನಡೆದ ಪರೇಶ್‍ ರಾವಲ್‍ ವಿರುದ್ಧ ಕೋರ್ಟ್‍ಗೆ ಹೋದ ಅಕ್ಷಯ್‍ ಕುಮಾರ್

ಬಾಲಿವುಡ್‍ನ ಜನಪ್ರಿಯ ನಟ ಪರೇಶ್‍ ರಾವಲ್‍ ವಿರುದ್ಧ ಅಕ್ಷಯ್‍ ಕುಮಾರ್ ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಪರೇಶ್‍ ಮೇಲೆ ಕೇಸ್‍ ದಾಖಲಿಸಿರುವ ಅವರು 25 ಕೋಟಿ ರೂ. ಪರಿಹಾರ ಕೇಳಿದ್ದಾರೆ.

ಅಕ್ಷಯ್‍ ಕುಮಾರ್ ಮತ್ತು ಪರೇಶ್‍ ರಾವಲ್‍ ಒಟ್ಟಾಗಿ ಹಲವು ಚಿತ್ರಗಳಲ್ಲಿ ನಟಿಸಿದವರು. ಅವರ ನಟನೆಯ ‘ಮೋಹ್ರಾ’, ‘ಹೇರಾ ಫೇರಿ’, ‘ಓ ಮೈ ಗಾಡ್‍’ ಮುಂತಾದ ಚಿತ್ರಗಳು ಸಾಕಷ್ಟು ಯಶಸ್ವಿಯಾಗಿವೆ. ಅದರಲ್ಲೂ 2000ದಲ್ಲಿ ಬಿಡುಗಡೆಯಾದ ‘ಹೇರಾ ಫೇರಿ’ ಚಿತ್ರವು ದೊಡ್ಡ ಯಶಸ್ಸು ಕಂಡಿತ್ತು. ಅದರ ನಂತರ ಅದರ ಮುಂದಿನ ಭಾಗವೂ ಬಂದಿತ್ತು. ಕೆಲವು ತಿಂಗಳುಗಳ ಹಿಂದೆ ‘ಹೇರಾ ಫೇರಿ 3’ ಚಿತ್ರದ ಘೋಷಣೆಯೂ ಆಗಿತ್ತು. ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದ ಪರೇಶ್‍, ಈಗ ಚಿತ್ರತಂಡದಿಂದ ಹೊರನಡೆದಿದ್ದಾರೆ. ಇದರಿಂದ ಬೇಸರಗೊಂಡಿರುವ ಅಕ್ಷಯ್‍ ಕುಮಾರ್, ಪರೇಶ್‍ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

‘ಹೇರಾ ಫೇರಿ’ ಸರಣಿಯ ಮೊದಲೆರಡು ಚಿತ್ರಗಳನ್ನು ಫಿರೋಜ್‍ ನಡಿಯಾಡ್‍ವಾಲಾ ನಿರ್ಮಿಸಿದ್ದರು. ಅವರಿಂದ ಚಿತ್ರದ ಹಕ್ಕುಗಳನ್ನು ಪಡೆದ ಅಕ್ಷಯ್‍ ಕುಮರ್, ಈ ಚಿತ್ರವನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದರು. ಈ ಚಿತ್ರದಲ್ಲಿ ಪರೇಶ್‍ ರಾವಲ್‍ ತಮ್ಮ ಬಾಬು ರಾವ್‍ ಪಾತ್ರವನ್ನು ಮುಂದುವರೆಸಬೇಕಾಗಿತ್ತು. 11 ಲಕ್ಷ ಮುಂಗಡ ಪಡೆದಿದ್ದ ಪರೇಶ್‍ ರಾವಲ್‍, ಚಿತ್ರದ ಟೀಸರ್ ಚಿತ್ರೀಕರಣದಲ್ಲೂ ಭಾಗಿಯಾಗಿದ್ದರಂತೆ. ಪೂರ್ಣಪ್ರಮಾಣದ ಚಿತ್ರೀಕರಣ ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ಪರೇಶ್‍ ರಾವಲ್, ಚಿತ್ರದಿಂದ ಹಿಂದೆ ಸರಿದಿದ್ದಾರೆ. ತಾವು ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಸೋಷಿಯಲ್‍ ಮೀಡಿಯಾದಲ್ಲಿ ಘೋಷಿಸಿದ್ದಾರೆ.

ಪರೇಶ್‍ ರಾವಲ್‍ ಅವರ ಈ ನಡೆಯಿಂದ ನಷ್ಟವಾಗಿದೆ ಎಂದು ಆರೋಪಿಸಿ ಅಕ್ಷಯ್ ಕುಮಾರ್ ಒಡೆತನದ ನಿರ್ಮಾಣ ಸಂಸ್ಥೆಯು, 25 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. ಒಂದು ವಾರದೊಳಗೆ ಅವರು 25 ಕೋಟಿ ರೂ.ಗಳನ್ನು ಡೆಪಾಸಿಟ್‍ ಇಡದಿದ್ದರೆ, ಅವರ ವಿರುದ್ಧ ಸಿವಿಲ್‍ ಮತ್ತು ಕ್ರಿಮಿನಲ್‍ ಮೊಕದ್ದಮೆಯನ್ನು ದಾಖಲಿಸುವುದಾಗಿ ನಿರ್ಮಾಣ ಸಂಸ್ಥೆ ಹೇಳಿದೆ.

ಹೇರಾ ಫೇರಿ 3’ ಚಿತ್ರದಿಂದ ಪರೇಶ್‍ ರಾವಲ್‍ ನಿಜಕ್ಕೂ ಹೊರನಡೆದು, ಅಕ್ಷಯ್‍ ಕೇಳಿದ ಪರಿಹಾರವನ್ನು ಕೊಡತ್ತಾರಾ? ಎಂಬುದನ್ನು ಕಾದು ನೋಡಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

23 mins ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

25 mins ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

27 mins ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

30 mins ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

37 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

41 mins ago