ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರವು ನವೆಂಬರ್.14ರಂದು ಮಕ್ಕಳ ದಿನದ ಪ್ರಯುಕ್ತ ಬಿಡುಗಡೆ ಆಗುತ್ತಿದೆ.
ಇದನ್ನು ಓದಿ: ‘ಬಿಳಿಚುಕ್ಕಿ ಹಳ್ಳಿಹಕ್ಕಿ’ಗೆ ಶ್ರೀಮುರಳಿ ಬೆಂಬಲ
ಈ ಚಿತ್ರವನ್ನು ಹೆದ್ದೂರು ಮಂಜುನಾಥ ಶೆಟ್ಟಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯೂ ಅವರದ್ದೇ. ‘ಚಿತ್ರದ ಹೆಸರು ’ಪಾಠಶಾಲಾ’ ಎಂದಿದೆ ಎಂಬ ಕಾರಣಕ್ಕೆ ಇದು ಮಕ್ಕಳ ಚಿತ್ರ ವಲ್ಲ. ಈಗಿನ ಶಿಕ್ಷಣ 80ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ವಿಷಯದ ಜೊತೆಗೆ ನನ್ನ ಪತ್ನಿಯ ಚಿಕ್ಕಪ್ಪ ಹೇಳಿದ ಅರಣ್ಯ ಭೂಮಿ ಒತ್ತುವರಿ ಮತ್ತು ತೆರವು ಮಾಡುವ ಸೂಕ್ಷ್ಮ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಚಿತ್ರಕ್ಕೆ 20 ದಿನಗಳ ಚಿತ್ರೀಕರಣ ನಡೆದಿದೆ. ನಿರ್ಮಾಪಕರು ಕೂಡ ಅಲ್ಲೇ ಸಿಕ್ಕರು. ಚಿತ್ರಕ್ಕೆ ‘ಓದು ಇಲ್ಲ ಓಡೋಗು’ ಎನ್ನುವ ಅಡಿ ಬರಹವಿದೆ. ಅದು ಏಕೆ? ಎನ್ನುವುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದರು.
‘ಪಾಠಶಾಲಾ’ ಚಿತ್ರದಲ್ಲಿ ಬಾಲಾಜಿ ಮನೋಹರ್, ಕಿರಣ್ ನಾಯಕ್, ಅಕ್ಷಯ್, ಸುಧಾಕರ್ ಬನ್ನಂಜೆ, ಬಾಲ ಕಲಾವಿದರಾದ ದಿಗಂತ್, ಮಿಥುನ್, ಆಯುಷ್, ಶ್ರೀಯಾನ್, ಅಹನ, ಗೌತಮಿ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ಪ್ರದೀಪ್ ಗುಡ್ಡೇಮನೆ, ಅರುಣ್ ಮಲ್ಲೇಸರ, ಭಾಸ್ಕರ್ ಕಮ್ಮರಡಿ ಮತ್ತು ರವಿ ಶೆಟ್ಟಿ ಜೊತೆಯಾಗಿ ನಿರ್ಮಿಸಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…