ಮನರಂಜನೆ

ಮಕ್ಕಳ ದಿನದಂದು ತೆರೆಗೆ ಬರಲಿದೆ ‘ಪಾಠಶಾಲಾ’

ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ‌ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರವು ನವೆಂಬರ್.14ರಂದು ಮಕ್ಕಳ ದಿನದ ಪ್ರಯುಕ್ತ ಬಿಡುಗಡೆ ಆಗುತ್ತಿದೆ.

ಇದನ್ನು ಓದಿ: ‘ಬಿಳಿಚುಕ್ಕಿ ಹಳ್ಳಿಹಕ್ಕಿ’ಗೆ ಶ್ರೀಮುರಳಿ ಬೆಂಬಲ

ಈ ಚಿತ್ರವನ್ನು ಹೆದ್ದೂರು ಮಂಜುನಾಥ ಶೆಟ್ಟಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯೂ ಅವರದ್ದೇ. ‘ಚಿತ್ರದ ಹೆಸರು ’ಪಾಠಶಾಲಾ’ ಎಂದಿದೆ ಎಂಬ ಕಾರಣಕ್ಕೆ ಇದು ಮಕ್ಕಳ ಚಿತ್ರ ವಲ್ಲ. ಈಗಿನ ಶಿಕ್ಷಣ 80ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ವಿಷಯದ ಜೊತೆಗೆ ನನ್ನ ಪತ್ನಿಯ ಚಿಕ್ಕಪ್ಪ ಹೇಳಿದ ಅರಣ್ಯ ಭೂಮಿ ಒತ್ತುವರಿ ಮತ್ತು ತೆರವು ಮಾಡುವ ಸೂಕ್ಷ್ಮ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಚಿತ್ರಕ್ಕೆ 20 ದಿನಗಳ ಚಿತ್ರೀಕರಣ ನಡೆದಿದೆ. ನಿರ್ಮಾಪಕರು ಕೂಡ ಅಲ್ಲೇ ಸಿಕ್ಕರು. ಚಿತ್ರಕ್ಕೆ ‘ಓದು ಇಲ್ಲ ಓಡೋಗು’ ಎನ್ನುವ ಅಡಿ ಬರಹವಿದೆ. ಅದು ಏಕೆ? ಎನ್ನುವುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದರು.

‘ಪಾಠಶಾಲಾ’ ಚಿತ್ರದಲ್ಲಿ ಬಾಲಾಜಿ ಮನೋಹರ್‍, ಕಿರಣ್‍ ನಾಯಕ್‍, ಅಕ್ಷಯ್‍, ಸುಧಾಕರ್‍ ಬನ್ನಂಜೆ, ಬಾಲ‌ ಕಲಾವಿದರಾದ ದಿಗಂತ್, ಮಿಥುನ್, ಆಯುಷ್, ಶ್ರೀಯಾನ್, ಅಹನ, ಗೌತಮಿ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ಪ್ರದೀಪ್ ಗುಡ್ಡೇಮನೆ, ಅರುಣ್ ಮಲ್ಲೇಸರ, ಭಾಸ್ಕರ್ ಕಮ್ಮರಡಿ ಮತ್ತು ರವಿ ಶೆಟ್ಟಿ ಜೊತೆಯಾಗಿ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

15 mins ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

42 mins ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

2 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

2 hours ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

2 hours ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

2 hours ago