ಮನರಂಜನೆ

ಮಕ್ಕಳ ದಿನದಂದು ತೆರೆಗೆ ಬರಲಿದೆ ‘ಪಾಠಶಾಲಾ’

ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ‌ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರವು ನವೆಂಬರ್.14ರಂದು ಮಕ್ಕಳ ದಿನದ ಪ್ರಯುಕ್ತ ಬಿಡುಗಡೆ ಆಗುತ್ತಿದೆ.

ಇದನ್ನು ಓದಿ: ‘ಬಿಳಿಚುಕ್ಕಿ ಹಳ್ಳಿಹಕ್ಕಿ’ಗೆ ಶ್ರೀಮುರಳಿ ಬೆಂಬಲ

ಈ ಚಿತ್ರವನ್ನು ಹೆದ್ದೂರು ಮಂಜುನಾಥ ಶೆಟ್ಟಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯೂ ಅವರದ್ದೇ. ‘ಚಿತ್ರದ ಹೆಸರು ’ಪಾಠಶಾಲಾ’ ಎಂದಿದೆ ಎಂಬ ಕಾರಣಕ್ಕೆ ಇದು ಮಕ್ಕಳ ಚಿತ್ರ ವಲ್ಲ. ಈಗಿನ ಶಿಕ್ಷಣ 80ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ವಿಷಯದ ಜೊತೆಗೆ ನನ್ನ ಪತ್ನಿಯ ಚಿಕ್ಕಪ್ಪ ಹೇಳಿದ ಅರಣ್ಯ ಭೂಮಿ ಒತ್ತುವರಿ ಮತ್ತು ತೆರವು ಮಾಡುವ ಸೂಕ್ಷ್ಮ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಚಿತ್ರಕ್ಕೆ 20 ದಿನಗಳ ಚಿತ್ರೀಕರಣ ನಡೆದಿದೆ. ನಿರ್ಮಾಪಕರು ಕೂಡ ಅಲ್ಲೇ ಸಿಕ್ಕರು. ಚಿತ್ರಕ್ಕೆ ‘ಓದು ಇಲ್ಲ ಓಡೋಗು’ ಎನ್ನುವ ಅಡಿ ಬರಹವಿದೆ. ಅದು ಏಕೆ? ಎನ್ನುವುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದರು.

‘ಪಾಠಶಾಲಾ’ ಚಿತ್ರದಲ್ಲಿ ಬಾಲಾಜಿ ಮನೋಹರ್‍, ಕಿರಣ್‍ ನಾಯಕ್‍, ಅಕ್ಷಯ್‍, ಸುಧಾಕರ್‍ ಬನ್ನಂಜೆ, ಬಾಲ‌ ಕಲಾವಿದರಾದ ದಿಗಂತ್, ಮಿಥುನ್, ಆಯುಷ್, ಶ್ರೀಯಾನ್, ಅಹನ, ಗೌತಮಿ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ಪ್ರದೀಪ್ ಗುಡ್ಡೇಮನೆ, ಅರುಣ್ ಮಲ್ಲೇಸರ, ಭಾಸ್ಕರ್ ಕಮ್ಮರಡಿ ಮತ್ತು ರವಿ ಶೆಟ್ಟಿ ಜೊತೆಯಾಗಿ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago