ಮನರಂಜನೆ

ಮಕ್ಕಳ ದಿನದಂದು ತೆರೆಗೆ ಬರಲಿದೆ ‘ಪಾಠಶಾಲಾ’

ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ‌ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರವು ನವೆಂಬರ್.14ರಂದು ಮಕ್ಕಳ ದಿನದ ಪ್ರಯುಕ್ತ ಬಿಡುಗಡೆ ಆಗುತ್ತಿದೆ.

ಇದನ್ನು ಓದಿ: ‘ಬಿಳಿಚುಕ್ಕಿ ಹಳ್ಳಿಹಕ್ಕಿ’ಗೆ ಶ್ರೀಮುರಳಿ ಬೆಂಬಲ

ಈ ಚಿತ್ರವನ್ನು ಹೆದ್ದೂರು ಮಂಜುನಾಥ ಶೆಟ್ಟಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯೂ ಅವರದ್ದೇ. ‘ಚಿತ್ರದ ಹೆಸರು ’ಪಾಠಶಾಲಾ’ ಎಂದಿದೆ ಎಂಬ ಕಾರಣಕ್ಕೆ ಇದು ಮಕ್ಕಳ ಚಿತ್ರ ವಲ್ಲ. ಈಗಿನ ಶಿಕ್ಷಣ 80ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ವಿಷಯದ ಜೊತೆಗೆ ನನ್ನ ಪತ್ನಿಯ ಚಿಕ್ಕಪ್ಪ ಹೇಳಿದ ಅರಣ್ಯ ಭೂಮಿ ಒತ್ತುವರಿ ಮತ್ತು ತೆರವು ಮಾಡುವ ಸೂಕ್ಷ್ಮ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಚಿತ್ರಕ್ಕೆ 20 ದಿನಗಳ ಚಿತ್ರೀಕರಣ ನಡೆದಿದೆ. ನಿರ್ಮಾಪಕರು ಕೂಡ ಅಲ್ಲೇ ಸಿಕ್ಕರು. ಚಿತ್ರಕ್ಕೆ ‘ಓದು ಇಲ್ಲ ಓಡೋಗು’ ಎನ್ನುವ ಅಡಿ ಬರಹವಿದೆ. ಅದು ಏಕೆ? ಎನ್ನುವುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದರು.

‘ಪಾಠಶಾಲಾ’ ಚಿತ್ರದಲ್ಲಿ ಬಾಲಾಜಿ ಮನೋಹರ್‍, ಕಿರಣ್‍ ನಾಯಕ್‍, ಅಕ್ಷಯ್‍, ಸುಧಾಕರ್‍ ಬನ್ನಂಜೆ, ಬಾಲ‌ ಕಲಾವಿದರಾದ ದಿಗಂತ್, ಮಿಥುನ್, ಆಯುಷ್, ಶ್ರೀಯಾನ್, ಅಹನ, ಗೌತಮಿ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ಪ್ರದೀಪ್ ಗುಡ್ಡೇಮನೆ, ಅರುಣ್ ಮಲ್ಲೇಸರ, ಭಾಸ್ಕರ್ ಕಮ್ಮರಡಿ ಮತ್ತು ರವಿ ಶೆಟ್ಟಿ ಜೊತೆಯಾಗಿ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago