ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್ ಬ್ರದರ್ಸ್ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿರುವ ತೆಲುಗಿನ ಪವರ್ ಸ್ಟಾರ್ ಪವರ್ ಕಲ್ಯಾಣ್ ಅವರು ತಮ್ಮ ಅಣ್ಣನ ಶೂಟಿಂಗ್ ಸ್ಪಾಟ್ಗೆ ಭೇಟಿ ನೀಡಿದ್ದಾರೆ.
ಸದ್ಯ ರಾಜಕೀಯದಿಂದ ದೂರ ಉಳಿದು ‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ ಬ್ಯುಸಿ ಇದ್ದಾರೆ. ಈ ಸಿನಿಮಾ ಸೆಟ್ಗೆ ನಟ ಪವನ್ ಕಲ್ಯಾಣ್ ಭೇಟಿ ನೀಡಿದ್ದಾರೆ.
ಇನ್ನು ‘ವಿಶ್ವಂಭರ’ ಚಿತ್ರತಂಡ ಶೂಟಿಂಗ್ ಸೆಟ್ಗೆ ಪವನ್ ಕಲ್ಯಾಣ್ ಭೇಟಿ ನೀಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿದೆ.
2008ರಲ್ಲಿ ಚಿರಂಜೀವಿ ಅವರು ‘ಪ್ರಜಾ ರಾಜ್ಯಂ’ ಪಕ್ಷವನ್ನು ಸ್ಥಾಪಿಸಿದರು. ರಾಜಕೀಯದ ಬಗ್ಗೆ ಗಮನ ಹರಿಸಲು ಅವರು ನಟನೆಗೆ ಒಂದು ಬ್ರೇಕ್ ಕೊಟ್ಟಿದ್ದರು. 10 ವರ್ಷಗಳ ಕಾಲ ಅವರು ರಾಜಕೀಯದಲ್ಲಿ ಬ್ಯುಸಿ ಆದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಪವನ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಈಗ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆಗಿದ್ದು, ಚಿರಂಜೀವಿ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ. ಪವನ್ ಕಲ್ಯಾಣ್ ಅವರಿಗೆ ಗಿಡ ನೀಡಿ ಸ್ವಾಗತಿಸಲಾಗಿದೆ.
‘ವಿಶ್ವಾಂಭರ’ ಚಿತ್ರವನ್ನು ಮಲ್ಲಿಡಿ ವಸಿಷ್ಠ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೆಗಾಸ್ಟಾರ್ ನಟನೆಯ ‘ವಿಶ್ವಂಭರ’ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…