ಮನರಂಜನೆ

ಲೋಕಸಭಾ ಚುನಾವಣೆ ಹಿನ್ನಲೆ ಮೆಗಾ ಸ್ಟಾರ್‌ ಭೇಟಿಯಾದ ಪವರ್‌ ಸ್ಟಾರ್‌!

ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್‌ ಬ್ರದರ್ಸ್‌ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್‌ ಬ್ಯುಸಿಯಾಗಿರುವ ತೆಲುಗಿನ ಪವರ್‌ ಸ್ಟಾರ್‌ ಪವರ್‌ ಕಲ್ಯಾಣ್‌ ಅವರು ತಮ್ಮ ಅಣ್ಣನ ಶೂಟಿಂಗ್‌ ಸ್ಪಾಟ್‌ಗೆ ಭೇಟಿ ನೀಡಿದ್ದಾರೆ.

ಸದ್ಯ ರಾಜಕೀಯದಿಂದ ದೂರ ಉಳಿದು ‘ವಿಶ್ವಂಭರ’ ಸಿನಿಮಾ ಶೂಟ್​ನಲ್ಲಿ ಚಿರಂಜೀವಿ ಬ್ಯುಸಿ ಇದ್ದಾರೆ. ಈ ಸಿನಿಮಾ ಸೆಟ್‌ಗೆ ನಟ ಪವನ್ ಕಲ್ಯಾಣ್ ಭೇಟಿ ನೀಡಿದ್ದಾರೆ.

ಇನ್ನು ‘ವಿಶ್ವಂಭರ’ ಚಿತ್ರತಂಡ ಶೂಟಿಂಗ್‌ ಸೆಟ್‌ಗೆ ಪವನ್‌ ಕಲ್ಯಾಣ್‌ ಭೇಟಿ ನೀಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿದೆ.

2008ರಲ್ಲಿ ಚಿರಂಜೀವಿ ಅವರು ‘ಪ್ರಜಾ ರಾಜ್ಯಂ’ ಪಕ್ಷವನ್ನು ಸ್ಥಾಪಿಸಿದರು. ರಾಜಕೀಯದ ಬಗ್ಗೆ ಗಮನ ಹರಿಸಲು ಅವರು ನಟನೆಗೆ ಒಂದು ಬ್ರೇಕ್ ಕೊಟ್ಟಿದ್ದರು. 10 ವರ್ಷಗಳ ಕಾಲ ಅವರು ರಾಜಕೀಯದಲ್ಲಿ ಬ್ಯುಸಿ ಆದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಪವನ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಈಗ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆಗಿದ್ದು, ಚಿರಂಜೀವಿ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

‘ವಿಶ್ವಂಭರ’ ಸಿನಿಮಾ ಶೂಟ್​ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ. ಪವನ್ ಕಲ್ಯಾಣ್ ಅವರಿಗೆ ಗಿಡ ನೀಡಿ ಸ್ವಾಗತಿಸಲಾಗಿದೆ.

‘ವಿಶ್ವಾಂಭರ’ ಚಿತ್ರವನ್ನು ಮಲ್ಲಿಡಿ ವಸಿಷ್ಠ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೆಗಾಸ್ಟಾರ್‌ ನಟನೆಯ ‘ವಿಶ್ವಂಭರ’ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

40 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

51 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

58 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago