ಮನರಂಜನೆ

ಲೋಕಸಭಾ ಚುನಾವಣೆ ಹಿನ್ನಲೆ ಮೆಗಾ ಸ್ಟಾರ್‌ ಭೇಟಿಯಾದ ಪವರ್‌ ಸ್ಟಾರ್‌!

ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್‌ ಬ್ರದರ್ಸ್‌ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್‌ ಬ್ಯುಸಿಯಾಗಿರುವ ತೆಲುಗಿನ ಪವರ್‌ ಸ್ಟಾರ್‌ ಪವರ್‌ ಕಲ್ಯಾಣ್‌ ಅವರು ತಮ್ಮ ಅಣ್ಣನ ಶೂಟಿಂಗ್‌ ಸ್ಪಾಟ್‌ಗೆ ಭೇಟಿ ನೀಡಿದ್ದಾರೆ.

ಸದ್ಯ ರಾಜಕೀಯದಿಂದ ದೂರ ಉಳಿದು ‘ವಿಶ್ವಂಭರ’ ಸಿನಿಮಾ ಶೂಟ್​ನಲ್ಲಿ ಚಿರಂಜೀವಿ ಬ್ಯುಸಿ ಇದ್ದಾರೆ. ಈ ಸಿನಿಮಾ ಸೆಟ್‌ಗೆ ನಟ ಪವನ್ ಕಲ್ಯಾಣ್ ಭೇಟಿ ನೀಡಿದ್ದಾರೆ.

ಇನ್ನು ‘ವಿಶ್ವಂಭರ’ ಚಿತ್ರತಂಡ ಶೂಟಿಂಗ್‌ ಸೆಟ್‌ಗೆ ಪವನ್‌ ಕಲ್ಯಾಣ್‌ ಭೇಟಿ ನೀಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿದೆ.

2008ರಲ್ಲಿ ಚಿರಂಜೀವಿ ಅವರು ‘ಪ್ರಜಾ ರಾಜ್ಯಂ’ ಪಕ್ಷವನ್ನು ಸ್ಥಾಪಿಸಿದರು. ರಾಜಕೀಯದ ಬಗ್ಗೆ ಗಮನ ಹರಿಸಲು ಅವರು ನಟನೆಗೆ ಒಂದು ಬ್ರೇಕ್ ಕೊಟ್ಟಿದ್ದರು. 10 ವರ್ಷಗಳ ಕಾಲ ಅವರು ರಾಜಕೀಯದಲ್ಲಿ ಬ್ಯುಸಿ ಆದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಪವನ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಈಗ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆಗಿದ್ದು, ಚಿರಂಜೀವಿ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

‘ವಿಶ್ವಂಭರ’ ಸಿನಿಮಾ ಶೂಟ್​ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ. ಪವನ್ ಕಲ್ಯಾಣ್ ಅವರಿಗೆ ಗಿಡ ನೀಡಿ ಸ್ವಾಗತಿಸಲಾಗಿದೆ.

‘ವಿಶ್ವಾಂಭರ’ ಚಿತ್ರವನ್ನು ಮಲ್ಲಿಡಿ ವಸಿಷ್ಠ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೆಗಾಸ್ಟಾರ್‌ ನಟನೆಯ ‘ವಿಶ್ವಂಭರ’ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

2 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

2 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

2 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

2 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

2 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

3 hours ago