ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್ ಬ್ರದರ್ಸ್ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿರುವ ತೆಲುಗಿನ ಪವರ್ ಸ್ಟಾರ್ ಪವರ್ ಕಲ್ಯಾಣ್ ಅವರು ತಮ್ಮ ಅಣ್ಣನ ಶೂಟಿಂಗ್ ಸ್ಪಾಟ್ಗೆ ಭೇಟಿ ನೀಡಿದ್ದಾರೆ.
ಸದ್ಯ ರಾಜಕೀಯದಿಂದ ದೂರ ಉಳಿದು ‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ ಬ್ಯುಸಿ ಇದ್ದಾರೆ. ಈ ಸಿನಿಮಾ ಸೆಟ್ಗೆ ನಟ ಪವನ್ ಕಲ್ಯಾಣ್ ಭೇಟಿ ನೀಡಿದ್ದಾರೆ.
ಇನ್ನು ‘ವಿಶ್ವಂಭರ’ ಚಿತ್ರತಂಡ ಶೂಟಿಂಗ್ ಸೆಟ್ಗೆ ಪವನ್ ಕಲ್ಯಾಣ್ ಭೇಟಿ ನೀಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿದೆ.
2008ರಲ್ಲಿ ಚಿರಂಜೀವಿ ಅವರು ‘ಪ್ರಜಾ ರಾಜ್ಯಂ’ ಪಕ್ಷವನ್ನು ಸ್ಥಾಪಿಸಿದರು. ರಾಜಕೀಯದ ಬಗ್ಗೆ ಗಮನ ಹರಿಸಲು ಅವರು ನಟನೆಗೆ ಒಂದು ಬ್ರೇಕ್ ಕೊಟ್ಟಿದ್ದರು. 10 ವರ್ಷಗಳ ಕಾಲ ಅವರು ರಾಜಕೀಯದಲ್ಲಿ ಬ್ಯುಸಿ ಆದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಪವನ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಈಗ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆಗಿದ್ದು, ಚಿರಂಜೀವಿ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ. ಪವನ್ ಕಲ್ಯಾಣ್ ಅವರಿಗೆ ಗಿಡ ನೀಡಿ ಸ್ವಾಗತಿಸಲಾಗಿದೆ.
‘ವಿಶ್ವಾಂಭರ’ ಚಿತ್ರವನ್ನು ಮಲ್ಲಿಡಿ ವಸಿಷ್ಠ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೆಗಾಸ್ಟಾರ್ ನಟನೆಯ ‘ವಿಶ್ವಂಭರ’ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…