ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್ ಬ್ರದರ್ಸ್ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿರುವ ತೆಲುಗಿನ ಪವರ್ ಸ್ಟಾರ್ ಪವರ್ ಕಲ್ಯಾಣ್ ಅವರು ತಮ್ಮ ಅಣ್ಣನ ಶೂಟಿಂಗ್ ಸ್ಪಾಟ್ಗೆ ಭೇಟಿ ನೀಡಿದ್ದಾರೆ.
ಸದ್ಯ ರಾಜಕೀಯದಿಂದ ದೂರ ಉಳಿದು ‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ ಬ್ಯುಸಿ ಇದ್ದಾರೆ. ಈ ಸಿನಿಮಾ ಸೆಟ್ಗೆ ನಟ ಪವನ್ ಕಲ್ಯಾಣ್ ಭೇಟಿ ನೀಡಿದ್ದಾರೆ.
ಇನ್ನು ‘ವಿಶ್ವಂಭರ’ ಚಿತ್ರತಂಡ ಶೂಟಿಂಗ್ ಸೆಟ್ಗೆ ಪವನ್ ಕಲ್ಯಾಣ್ ಭೇಟಿ ನೀಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿದೆ.
2008ರಲ್ಲಿ ಚಿರಂಜೀವಿ ಅವರು ‘ಪ್ರಜಾ ರಾಜ್ಯಂ’ ಪಕ್ಷವನ್ನು ಸ್ಥಾಪಿಸಿದರು. ರಾಜಕೀಯದ ಬಗ್ಗೆ ಗಮನ ಹರಿಸಲು ಅವರು ನಟನೆಗೆ ಒಂದು ಬ್ರೇಕ್ ಕೊಟ್ಟಿದ್ದರು. 10 ವರ್ಷಗಳ ಕಾಲ ಅವರು ರಾಜಕೀಯದಲ್ಲಿ ಬ್ಯುಸಿ ಆದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಪವನ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಈಗ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆಗಿದ್ದು, ಚಿರಂಜೀವಿ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ. ಪವನ್ ಕಲ್ಯಾಣ್ ಅವರಿಗೆ ಗಿಡ ನೀಡಿ ಸ್ವಾಗತಿಸಲಾಗಿದೆ.
‘ವಿಶ್ವಾಂಭರ’ ಚಿತ್ರವನ್ನು ಮಲ್ಲಿಡಿ ವಸಿಷ್ಠ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೆಗಾಸ್ಟಾರ್ ನಟನೆಯ ‘ವಿಶ್ವಂಭರ’ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…