ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್ ಬ್ರದರ್ಸ್ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿರುವ ತೆಲುಗಿನ ಪವರ್ ಸ್ಟಾರ್ ಪವರ್ ಕಲ್ಯಾಣ್ ಅವರು ತಮ್ಮ ಅಣ್ಣನ ಶೂಟಿಂಗ್ ಸ್ಪಾಟ್ಗೆ ಭೇಟಿ ನೀಡಿದ್ದಾರೆ.
ಸದ್ಯ ರಾಜಕೀಯದಿಂದ ದೂರ ಉಳಿದು ‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ ಬ್ಯುಸಿ ಇದ್ದಾರೆ. ಈ ಸಿನಿಮಾ ಸೆಟ್ಗೆ ನಟ ಪವನ್ ಕಲ್ಯಾಣ್ ಭೇಟಿ ನೀಡಿದ್ದಾರೆ.
ಇನ್ನು ‘ವಿಶ್ವಂಭರ’ ಚಿತ್ರತಂಡ ಶೂಟಿಂಗ್ ಸೆಟ್ಗೆ ಪವನ್ ಕಲ್ಯಾಣ್ ಭೇಟಿ ನೀಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿದೆ.
2008ರಲ್ಲಿ ಚಿರಂಜೀವಿ ಅವರು ‘ಪ್ರಜಾ ರಾಜ್ಯಂ’ ಪಕ್ಷವನ್ನು ಸ್ಥಾಪಿಸಿದರು. ರಾಜಕೀಯದ ಬಗ್ಗೆ ಗಮನ ಹರಿಸಲು ಅವರು ನಟನೆಗೆ ಒಂದು ಬ್ರೇಕ್ ಕೊಟ್ಟಿದ್ದರು. 10 ವರ್ಷಗಳ ಕಾಲ ಅವರು ರಾಜಕೀಯದಲ್ಲಿ ಬ್ಯುಸಿ ಆದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಪವನ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದರು. ಈಗ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಆಗಿದ್ದು, ಚಿರಂಜೀವಿ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ. ಪವನ್ ಕಲ್ಯಾಣ್ ಅವರಿಗೆ ಗಿಡ ನೀಡಿ ಸ್ವಾಗತಿಸಲಾಗಿದೆ.
‘ವಿಶ್ವಾಂಭರ’ ಚಿತ್ರವನ್ನು ಮಲ್ಲಿಡಿ ವಸಿಷ್ಠ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೆಗಾಸ್ಟಾರ್ ನಟನೆಯ ‘ವಿಶ್ವಂಭರ’ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…