ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್ ಸಿಂಗ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ತಮ್ಮ ಮಗಳ ಹೆಸರನ್ನು ಬಳಸದಂತೆ ಮನವಿ ಮಾಡಿದ್ದಾರೆ.
ಸಂಜಯ್ ಸಿಂಗ್ ಹಾಗೂ ಪವಿತ್ರಾ ಗೌಡ ಪರಸ್ಪರ ವಿಚ್ಛೇದನ ಪಡೆದು ಹಲವು ವರ್ಷಗಳೇ ಕಳೆದಿದೆ. ಈವರೆಗೆ ಯಾವುದೇ ಸುದ್ದಿಯಲ್ಲಿಲ್ಲದ ಸಂಜಯ್ ಸಿಂಗ್ ತಮ್ಮ ಮಾಜಿ ಪತ್ನಿ ಕೊಲೆ ಪ್ರಕರಣದಲ್ಲಿ ಸಿಲುಕಿದ ಬಳಿಕ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ.
ನಾನು ಎಲ್ಲಾ ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ನನ್ನ ಹೆಸರು, ನನ್ನ ಮಾಜಿ ಪತ್ನಿ ಹೆಸರನ್ನು ಹಾಳು ಮಾಡಿ ಪರವಾಗಿಲ್ಲ. ಆದರೆ ನನ್ನ ಮಗಳು ಇನ್ನು ಚಿಕ್ಕವಳಾಗಿದ್ದು, ಅವಳ ಹೆಸರನ್ನು ಈ ಪ್ರಕರಣದ ಮಧ್ಯೆ ತರಬೇಡಿ. ದಯವಿಟ್ಟು ಹೆಣ್ಣು ಮಕ್ಕಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ಇನ್ನು ಪವಿತ್ರಾ ಬಗ್ಗೆಯೂ ಸಂಜಯ್ ಮಾತನಾಡಿದ್ದು, ಪವಿತ್ರಾ ಕೊಲೆ ಮಾಡುವ ವ್ಯಕ್ತಿಯಲ್ಲ. ಹಾಗಂತ ನಾನು ಆಕೆಯ ಪರ ವಕಾಲತ್ತು ವಹಿಸುತ್ತಿಲ್ಲ. ಆದರೆ ಆಕೆ ಕೊಲೆ ಮಾಡುವ ವ್ಯಕ್ತಿಯಲ್ಲ ಜನರ ಈ ಬಗ್ಗೆ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಕಾನೂನು ತನಿಖೆ ಮಾಡುತ್ತದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂಜಯ್ ಸಿಂಗ್ ಮಾತನಾಡಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…