ಮನರಂಜನೆ

ಪವಿತ್ರಾ ಗೌಡ ಬಂಧನ: ಮಾಜಿ ಪತಿ ಸಂಜಯ್‌ ಸಿಂಗ್‌ ಪ್ರತಿಕ್ರಿಯೆ ಇದು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್‌ ಸಿಂಗ್‌ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ತಮ್ಮ ಮಗಳ ಹೆಸರನ್ನು ಬಳಸದಂತೆ ಮನವಿ ಮಾಡಿದ್ದಾರೆ.

ಸಂಜಯ್‌ ಸಿಂಗ್‌ ಹಾಗೂ ಪವಿತ್ರಾ ಗೌಡ ಪರಸ್ಪರ ವಿಚ್ಛೇದನ ಪಡೆದು ಹಲವು ವರ್ಷಗಳೇ ಕಳೆದಿದೆ. ಈವರೆಗೆ ಯಾವುದೇ ಸುದ್ದಿಯಲ್ಲಿಲ್ಲದ ಸಂಜಯ್‌ ಸಿಂಗ್‌ ತಮ್ಮ ಮಾಜಿ ಪತ್ನಿ ಕೊಲೆ ಪ್ರಕರಣದಲ್ಲಿ ಸಿಲುಕಿದ ಬಳಿಕ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ.

ನಾನು ಎಲ್ಲಾ ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ನನ್ನ ಹೆಸರು, ನನ್ನ ಮಾಜಿ ಪತ್ನಿ ಹೆಸರನ್ನು ಹಾಳು ಮಾಡಿ ಪರವಾಗಿಲ್ಲ. ಆದರೆ ನನ್ನ ಮಗಳು ಇನ್ನು ಚಿಕ್ಕವಳಾಗಿದ್ದು, ಅವಳ ಹೆಸರನ್ನು ಈ ಪ್ರಕರಣದ ಮಧ್ಯೆ ತರಬೇಡಿ. ದಯವಿಟ್ಟು ಹೆಣ್ಣು ಮಕ್ಕಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

ಇನ್ನು ಪವಿತ್ರಾ ಬಗ್ಗೆಯೂ ಸಂಜಯ್‌ ಮಾತನಾಡಿದ್ದು, ಪವಿತ್ರಾ ಕೊಲೆ ಮಾಡುವ ವ್ಯಕ್ತಿಯಲ್ಲ. ಹಾಗಂತ ನಾನು ಆಕೆಯ ಪರ ವಕಾಲತ್ತು ವಹಿಸುತ್ತಿಲ್ಲ. ಆದರೆ ಆಕೆ ಕೊಲೆ ಮಾಡುವ ವ್ಯಕ್ತಿಯಲ್ಲ ಜನರ ಈ ಬಗ್ಗೆ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಕಾನೂನು ತನಿಖೆ ಮಾಡುತ್ತದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂಜಯ್‌ ಸಿಂಗ್‌ ಮಾತನಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

2 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

5 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

5 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

5 hours ago