ಮನರಂಜನೆ

ಪವಿತ್ರಾ ಗೌಡ ಬಂಧನ: ಮಾಜಿ ಪತಿ ಸಂಜಯ್‌ ಸಿಂಗ್‌ ಪ್ರತಿಕ್ರಿಯೆ ಇದು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್‌ ಸಿಂಗ್‌ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ತಮ್ಮ ಮಗಳ ಹೆಸರನ್ನು ಬಳಸದಂತೆ ಮನವಿ ಮಾಡಿದ್ದಾರೆ.

ಸಂಜಯ್‌ ಸಿಂಗ್‌ ಹಾಗೂ ಪವಿತ್ರಾ ಗೌಡ ಪರಸ್ಪರ ವಿಚ್ಛೇದನ ಪಡೆದು ಹಲವು ವರ್ಷಗಳೇ ಕಳೆದಿದೆ. ಈವರೆಗೆ ಯಾವುದೇ ಸುದ್ದಿಯಲ್ಲಿಲ್ಲದ ಸಂಜಯ್‌ ಸಿಂಗ್‌ ತಮ್ಮ ಮಾಜಿ ಪತ್ನಿ ಕೊಲೆ ಪ್ರಕರಣದಲ್ಲಿ ಸಿಲುಕಿದ ಬಳಿಕ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ.

ನಾನು ಎಲ್ಲಾ ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ನನ್ನ ಹೆಸರು, ನನ್ನ ಮಾಜಿ ಪತ್ನಿ ಹೆಸರನ್ನು ಹಾಳು ಮಾಡಿ ಪರವಾಗಿಲ್ಲ. ಆದರೆ ನನ್ನ ಮಗಳು ಇನ್ನು ಚಿಕ್ಕವಳಾಗಿದ್ದು, ಅವಳ ಹೆಸರನ್ನು ಈ ಪ್ರಕರಣದ ಮಧ್ಯೆ ತರಬೇಡಿ. ದಯವಿಟ್ಟು ಹೆಣ್ಣು ಮಕ್ಕಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

ಇನ್ನು ಪವಿತ್ರಾ ಬಗ್ಗೆಯೂ ಸಂಜಯ್‌ ಮಾತನಾಡಿದ್ದು, ಪವಿತ್ರಾ ಕೊಲೆ ಮಾಡುವ ವ್ಯಕ್ತಿಯಲ್ಲ. ಹಾಗಂತ ನಾನು ಆಕೆಯ ಪರ ವಕಾಲತ್ತು ವಹಿಸುತ್ತಿಲ್ಲ. ಆದರೆ ಆಕೆ ಕೊಲೆ ಮಾಡುವ ವ್ಯಕ್ತಿಯಲ್ಲ ಜನರ ಈ ಬಗ್ಗೆ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಕಾನೂನು ತನಿಖೆ ಮಾಡುತ್ತದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂಜಯ್‌ ಸಿಂಗ್‌ ಮಾತನಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

8 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

10 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

11 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

11 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

13 hours ago