ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್ ಸಿಂಗ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ತಮ್ಮ ಮಗಳ ಹೆಸರನ್ನು ಬಳಸದಂತೆ ಮನವಿ ಮಾಡಿದ್ದಾರೆ.
ಸಂಜಯ್ ಸಿಂಗ್ ಹಾಗೂ ಪವಿತ್ರಾ ಗೌಡ ಪರಸ್ಪರ ವಿಚ್ಛೇದನ ಪಡೆದು ಹಲವು ವರ್ಷಗಳೇ ಕಳೆದಿದೆ. ಈವರೆಗೆ ಯಾವುದೇ ಸುದ್ದಿಯಲ್ಲಿಲ್ಲದ ಸಂಜಯ್ ಸಿಂಗ್ ತಮ್ಮ ಮಾಜಿ ಪತ್ನಿ ಕೊಲೆ ಪ್ರಕರಣದಲ್ಲಿ ಸಿಲುಕಿದ ಬಳಿಕ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ.
ನಾನು ಎಲ್ಲಾ ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ನನ್ನ ಹೆಸರು, ನನ್ನ ಮಾಜಿ ಪತ್ನಿ ಹೆಸರನ್ನು ಹಾಳು ಮಾಡಿ ಪರವಾಗಿಲ್ಲ. ಆದರೆ ನನ್ನ ಮಗಳು ಇನ್ನು ಚಿಕ್ಕವಳಾಗಿದ್ದು, ಅವಳ ಹೆಸರನ್ನು ಈ ಪ್ರಕರಣದ ಮಧ್ಯೆ ತರಬೇಡಿ. ದಯವಿಟ್ಟು ಹೆಣ್ಣು ಮಕ್ಕಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ಇನ್ನು ಪವಿತ್ರಾ ಬಗ್ಗೆಯೂ ಸಂಜಯ್ ಮಾತನಾಡಿದ್ದು, ಪವಿತ್ರಾ ಕೊಲೆ ಮಾಡುವ ವ್ಯಕ್ತಿಯಲ್ಲ. ಹಾಗಂತ ನಾನು ಆಕೆಯ ಪರ ವಕಾಲತ್ತು ವಹಿಸುತ್ತಿಲ್ಲ. ಆದರೆ ಆಕೆ ಕೊಲೆ ಮಾಡುವ ವ್ಯಕ್ತಿಯಲ್ಲ ಜನರ ಈ ಬಗ್ಗೆ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಕಾನೂನು ತನಿಖೆ ಮಾಡುತ್ತದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂಜಯ್ ಸಿಂಗ್ ಮಾತನಾಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…