ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್ ಸಿಂಗ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ತಮ್ಮ ಮಗಳ ಹೆಸರನ್ನು ಬಳಸದಂತೆ ಮನವಿ ಮಾಡಿದ್ದಾರೆ.
ಸಂಜಯ್ ಸಿಂಗ್ ಹಾಗೂ ಪವಿತ್ರಾ ಗೌಡ ಪರಸ್ಪರ ವಿಚ್ಛೇದನ ಪಡೆದು ಹಲವು ವರ್ಷಗಳೇ ಕಳೆದಿದೆ. ಈವರೆಗೆ ಯಾವುದೇ ಸುದ್ದಿಯಲ್ಲಿಲ್ಲದ ಸಂಜಯ್ ಸಿಂಗ್ ತಮ್ಮ ಮಾಜಿ ಪತ್ನಿ ಕೊಲೆ ಪ್ರಕರಣದಲ್ಲಿ ಸಿಲುಕಿದ ಬಳಿಕ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ.
ನಾನು ಎಲ್ಲಾ ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ನನ್ನ ಹೆಸರು, ನನ್ನ ಮಾಜಿ ಪತ್ನಿ ಹೆಸರನ್ನು ಹಾಳು ಮಾಡಿ ಪರವಾಗಿಲ್ಲ. ಆದರೆ ನನ್ನ ಮಗಳು ಇನ್ನು ಚಿಕ್ಕವಳಾಗಿದ್ದು, ಅವಳ ಹೆಸರನ್ನು ಈ ಪ್ರಕರಣದ ಮಧ್ಯೆ ತರಬೇಡಿ. ದಯವಿಟ್ಟು ಹೆಣ್ಣು ಮಕ್ಕಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ಇನ್ನು ಪವಿತ್ರಾ ಬಗ್ಗೆಯೂ ಸಂಜಯ್ ಮಾತನಾಡಿದ್ದು, ಪವಿತ್ರಾ ಕೊಲೆ ಮಾಡುವ ವ್ಯಕ್ತಿಯಲ್ಲ. ಹಾಗಂತ ನಾನು ಆಕೆಯ ಪರ ವಕಾಲತ್ತು ವಹಿಸುತ್ತಿಲ್ಲ. ಆದರೆ ಆಕೆ ಕೊಲೆ ಮಾಡುವ ವ್ಯಕ್ತಿಯಲ್ಲ ಜನರ ಈ ಬಗ್ಗೆ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಕಾನೂನು ತನಿಖೆ ಮಾಡುತ್ತದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂಜಯ್ ಸಿಂಗ್ ಮಾತನಾಡಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…