ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌, ಚಿಕ್ಕಣ್ಣ ಕರೆತಂದು ಸ್ಟೋನಿ ಬ್ರೂಕ್‌ ಪಬ್‌ನಲ್ಲಿ ಸ್ಥಳ ಮಹಜರು

ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತು ಆತನ ಸಹಚರರನ್ನು ಪೊಲೀಸರು ಈಗಾಗಲೇ ಬಂದಿಸಿದ್ದಾರೆ. ಈ ಪ್ರಕರಣ ಪ್ರತಿನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ.

ಜೂನ್‌.8 ರ ಶನಿವಾರದಂದು ರೇಣುಕಾಸ್ವಾಮಿ ಹತ್ಯೆ ದಿನ ನಟ ದರ್ಶನ್‌ ಸೇರಿದಂತೆ ಆತನ ಸಹಚರರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್‌ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ನಲ್ಲಿಂದು ಸ್ಥಳ ಮಹಜರು ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿ ಅಲ್ಲಿಂದ ಠಾಣೆಗೆ ಕರೆದೊಯ್ದರು.

ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು, ಎಸಿಪಿ ಭರತ್‌ ರೆಡ್ಡಿ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದರು. ನಟ ದರ್ಶನ್‌, ಉದ್ಯಮಿ ವಿನಯ್‌, ಪ್ರದೂಶ್‌, ಪವನ್‌ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು.

ಈ ಪಾರ್ಟಿಯಲ್ಲಿ ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಅವರು ಕೂಡಾ ಭಾಗಿಯಾಗಿದ್ದರು ಎನ್ನಲಾಗಿದ್ದು, ದರ್ಶನ್‌ ಜತೆಯಲ್ಲಿ ಚಿಕ್ಕಣ್ಣ ಕರೆತಂದು ಸ್ಥಳ ಮಹಜರು ಮಾಡಿದರು.

ಇತ್ತ ದರ್ಶನ್‌ ಅವರನ್ನು ಕರೆತಂದು ಸ್ಥಳ ಮಹಜರು ಮಾಡುವ ಮೊದಲೇ ಚಿಕ್ಕಣ್ಣ ಅವರನ್ನು ಕರೆತಂದು ಸ್ಥಳ ಮಹಜರು ಮಾಡಿದ್ದಾರೆ ಎನ್ನಲಾಗಿದೆ. ಪಬ್‌ನ ಮೂಲ ಮೂಲೆಗಳನ್ನು ಹುಡುಕಿ ಜಾಲಾಡುವ ಮೂಲಕ ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ.

ಇನ್ನು ದರ್ಶನ್‌ ಮತ್ತು ಗ್ಯಾಂಗ್‌ ಸ್ಥಳ ಮಹಜರಿಗೆ ಆಗಮಿಸುವ ವೇಳೆ ಕೆಂಗೇರಿ ಹಾಗೂ ಆರ್‌ಆರ್‌ ನಗರ ಪೊಲೀಸರು ಪಬ್‌ ಸುತ್ತಲೂ ಬಿಗಿಭದ್ರತೆ ಒದಗಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago