ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಆತನ ಸಹಚರರನ್ನು ಪೊಲೀಸರು ಈಗಾಗಲೇ ಬಂದಿಸಿದ್ದಾರೆ. ಈ ಪ್ರಕರಣ ಪ್ರತಿನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ.
ಜೂನ್.8 ರ ಶನಿವಾರದಂದು ರೇಣುಕಾಸ್ವಾಮಿ ಹತ್ಯೆ ದಿನ ನಟ ದರ್ಶನ್ ಸೇರಿದಂತೆ ಆತನ ಸಹಚರರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್ಆರ್ ನಗರದ ಸ್ಟೋನಿ ಬ್ರೂಕ್ ಪಬ್ನಲ್ಲಿಂದು ಸ್ಥಳ ಮಹಜರು ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿ ಅಲ್ಲಿಂದ ಠಾಣೆಗೆ ಕರೆದೊಯ್ದರು.
ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು, ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದರು. ನಟ ದರ್ಶನ್, ಉದ್ಯಮಿ ವಿನಯ್, ಪ್ರದೂಶ್, ಪವನ್ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು.
ಈ ಪಾರ್ಟಿಯಲ್ಲಿ ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಅವರು ಕೂಡಾ ಭಾಗಿಯಾಗಿದ್ದರು ಎನ್ನಲಾಗಿದ್ದು, ದರ್ಶನ್ ಜತೆಯಲ್ಲಿ ಚಿಕ್ಕಣ್ಣ ಕರೆತಂದು ಸ್ಥಳ ಮಹಜರು ಮಾಡಿದರು.
ಇತ್ತ ದರ್ಶನ್ ಅವರನ್ನು ಕರೆತಂದು ಸ್ಥಳ ಮಹಜರು ಮಾಡುವ ಮೊದಲೇ ಚಿಕ್ಕಣ್ಣ ಅವರನ್ನು ಕರೆತಂದು ಸ್ಥಳ ಮಹಜರು ಮಾಡಿದ್ದಾರೆ ಎನ್ನಲಾಗಿದೆ. ಪಬ್ನ ಮೂಲ ಮೂಲೆಗಳನ್ನು ಹುಡುಕಿ ಜಾಲಾಡುವ ಮೂಲಕ ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಇನ್ನು ದರ್ಶನ್ ಮತ್ತು ಗ್ಯಾಂಗ್ ಸ್ಥಳ ಮಹಜರಿಗೆ ಆಗಮಿಸುವ ವೇಳೆ ಕೆಂಗೇರಿ ಹಾಗೂ ಆರ್ಆರ್ ನಗರ ಪೊಲೀಸರು ಪಬ್ ಸುತ್ತಲೂ ಬಿಗಿಭದ್ರತೆ ಒದಗಿಸಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…