ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಆತನ ಸಹಚರರನ್ನು ಪೊಲೀಸರು ಈಗಾಗಲೇ ಬಂದಿಸಿದ್ದಾರೆ. ಈ ಪ್ರಕರಣ ಪ್ರತಿನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ.
ಜೂನ್.8 ರ ಶನಿವಾರದಂದು ರೇಣುಕಾಸ್ವಾಮಿ ಹತ್ಯೆ ದಿನ ನಟ ದರ್ಶನ್ ಸೇರಿದಂತೆ ಆತನ ಸಹಚರರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್ಆರ್ ನಗರದ ಸ್ಟೋನಿ ಬ್ರೂಕ್ ಪಬ್ನಲ್ಲಿಂದು ಸ್ಥಳ ಮಹಜರು ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿ ಅಲ್ಲಿಂದ ಠಾಣೆಗೆ ಕರೆದೊಯ್ದರು.
ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು, ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದರು. ನಟ ದರ್ಶನ್, ಉದ್ಯಮಿ ವಿನಯ್, ಪ್ರದೂಶ್, ಪವನ್ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು.
ಈ ಪಾರ್ಟಿಯಲ್ಲಿ ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಅವರು ಕೂಡಾ ಭಾಗಿಯಾಗಿದ್ದರು ಎನ್ನಲಾಗಿದ್ದು, ದರ್ಶನ್ ಜತೆಯಲ್ಲಿ ಚಿಕ್ಕಣ್ಣ ಕರೆತಂದು ಸ್ಥಳ ಮಹಜರು ಮಾಡಿದರು.
ಇತ್ತ ದರ್ಶನ್ ಅವರನ್ನು ಕರೆತಂದು ಸ್ಥಳ ಮಹಜರು ಮಾಡುವ ಮೊದಲೇ ಚಿಕ್ಕಣ್ಣ ಅವರನ್ನು ಕರೆತಂದು ಸ್ಥಳ ಮಹಜರು ಮಾಡಿದ್ದಾರೆ ಎನ್ನಲಾಗಿದೆ. ಪಬ್ನ ಮೂಲ ಮೂಲೆಗಳನ್ನು ಹುಡುಕಿ ಜಾಲಾಡುವ ಮೂಲಕ ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಇನ್ನು ದರ್ಶನ್ ಮತ್ತು ಗ್ಯಾಂಗ್ ಸ್ಥಳ ಮಹಜರಿಗೆ ಆಗಮಿಸುವ ವೇಳೆ ಕೆಂಗೇರಿ ಹಾಗೂ ಆರ್ಆರ್ ನಗರ ಪೊಲೀಸರು ಪಬ್ ಸುತ್ತಲೂ ಬಿಗಿಭದ್ರತೆ ಒದಗಿಸಿದ್ದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…