ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಆತನ ಸಹಚರರನ್ನು ಪೊಲೀಸರು ಈಗಾಗಲೇ ಬಂದಿಸಿದ್ದಾರೆ. ಈ ಪ್ರಕರಣ ಪ್ರತಿನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ.
ಜೂನ್.8 ರ ಶನಿವಾರದಂದು ರೇಣುಕಾಸ್ವಾಮಿ ಹತ್ಯೆ ದಿನ ನಟ ದರ್ಶನ್ ಸೇರಿದಂತೆ ಆತನ ಸಹಚರರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್ಆರ್ ನಗರದ ಸ್ಟೋನಿ ಬ್ರೂಕ್ ಪಬ್ನಲ್ಲಿಂದು ಸ್ಥಳ ಮಹಜರು ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿ ಅಲ್ಲಿಂದ ಠಾಣೆಗೆ ಕರೆದೊಯ್ದರು.
ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು, ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದರು. ನಟ ದರ್ಶನ್, ಉದ್ಯಮಿ ವಿನಯ್, ಪ್ರದೂಶ್, ಪವನ್ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು.
ಈ ಪಾರ್ಟಿಯಲ್ಲಿ ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಅವರು ಕೂಡಾ ಭಾಗಿಯಾಗಿದ್ದರು ಎನ್ನಲಾಗಿದ್ದು, ದರ್ಶನ್ ಜತೆಯಲ್ಲಿ ಚಿಕ್ಕಣ್ಣ ಕರೆತಂದು ಸ್ಥಳ ಮಹಜರು ಮಾಡಿದರು.
ಇತ್ತ ದರ್ಶನ್ ಅವರನ್ನು ಕರೆತಂದು ಸ್ಥಳ ಮಹಜರು ಮಾಡುವ ಮೊದಲೇ ಚಿಕ್ಕಣ್ಣ ಅವರನ್ನು ಕರೆತಂದು ಸ್ಥಳ ಮಹಜರು ಮಾಡಿದ್ದಾರೆ ಎನ್ನಲಾಗಿದೆ. ಪಬ್ನ ಮೂಲ ಮೂಲೆಗಳನ್ನು ಹುಡುಕಿ ಜಾಲಾಡುವ ಮೂಲಕ ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಇನ್ನು ದರ್ಶನ್ ಮತ್ತು ಗ್ಯಾಂಗ್ ಸ್ಥಳ ಮಹಜರಿಗೆ ಆಗಮಿಸುವ ವೇಳೆ ಕೆಂಗೇರಿ ಹಾಗೂ ಆರ್ಆರ್ ನಗರ ಪೊಲೀಸರು ಪಬ್ ಸುತ್ತಲೂ ಬಿಗಿಭದ್ರತೆ ಒದಗಿಸಿದ್ದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…