ಮನರಂಜನೆ

ಪಾಲಿಟಿಕ್ಸ್ ಮೈಂಡ್‌ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು: ಶಿವರಾಜ್‌ಕುಮಾರ್

ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್‌ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಮಾತ್ರವಲ್ಲ ಅವರ ಪರ ಪ್ರಚಾರ ಮಾಡುವವರಿಗೂ ಟೀಕೆಗಳು ಎದುರಾಗುತ್ತವೆ. ಶಿವಣ್ಣ ಚುನಾವಣೆ ಪ್ರಚಾರ ಮಾಡುತ್ತಿರುವುದನ್ನು ಕೆಲವರು ಟೀಕಿಸಿದ್ದಾರೆ. ಈ ವಿಚಾರವಾಗಿ ಶಿವಣ್ಣನಿಗೆ ಪ್ರಶ್ನೆ ಎದುರಾದಾಗ ನನಗಗೆ ವಯಸ್ಸು 62 ಆಗಿದೆ. ಮತ ಹಾಕೋಕೆ ಪ್ರಾರಂಭಿಸಿ 42 ವರ್ಷಗಳು ಕಳೆದಿದೆ. ಈಗಲು ರಾಜಕೀಯ ಅರ್ಥ ಆಗಿಲ್ಲ ಅಂದರೆ ಹೇಗೆ? ಎಂದು ಮರುಪ್ರಶ್ನಿಸಿದ್ದಾರೆ.

ಆ ಮೂಲಕ ಯಾರೇ ಟೀಕೆ ಮಾಡಿದರು ನಾನು ಅಂಜುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಮಾತಿನ ಭರದಲ್ಲಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್‌ ಕುಮಾರ್‌ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ಡಮ್ಮಿ ಕ್ಯಾಂಡಿಡೇಟ್‌ನ್ನು ಕಾಂಗ್ರೆಸ್‌ ತಂದು ನಿಲ್ಲಿಸಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

7 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

7 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

7 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

7 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

7 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

7 hours ago