ಮನರಂಜನೆ

‘ದಿ ರಾಜಾ ಸಾಬ್’ ಆಗಿ ಬರ್ತಿದ್ದಾರೆ ಪ್ರಭಾಸ್

ತೆಲುಗು ನಟ ಪ್ರಭಾಸ್‍ ಅವರನ್ನು ಆ್ಯಕ್ಷನ್‍ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್‍ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್‍ ಒಂದು ಹಾರರ್‍ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

‘ಕಲ್ಕಿ 2898 AD’ ಚಿತ್ರದ ಯಶಸ್ಸಿನ ಬಳಿಕ ಪ್ರಭಾಸ್‍ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಎದುರಾಗಿದ್ದಾರೆ. ಅದೇ ‘ದಿ ರಾಜ ಸಾಬ್‍’. ‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಒಂದು ಸಣ್ಣ ಟೀಸರ್‍ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ ಬಿಡುಗಡೆಯಾಗಿದೆ.

ಈ ಟೀಸರ್‍ನಲ್ಲಿ ಬರೀ ಪ್ರಭಾಸ್‍ ಅವರ ಪಾತ್ರದ ಪರಿಚಯವನ್ನಷ್ಟೇ ಅಲ್ಲ, ಚಿತ್ರ ಯಾವಾಗ ಬಿಡುಗಡೆ ಎಂಬ ಮಾಹಿತಿಯನ್ನೂ ನೀಡಲಾಗಿದೆ. ಚಿತ್ರವನ್ನು 2025ರ ಏಪ್ರಿಲ್‍ 10ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸುತ್ತಿದೆ. ಪ್ರಭಾಸ್‍ ಅವರ ಹಿಂದಿನ ಚಿತ್ರಗಳಂತೆ ಈ ಚಿತ್ರ ಸಹ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲಿ ನಿರ್ಮಾಣವಾಗಿ ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದೆ.

‘ದಿ ರಾಜ ಸಾಬ್‍’ ಚಿತ್ರಕ್ಕೆ ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್.ಎಸ್. ಥಮನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

17 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

42 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago