ಮನರಂಜನೆ

‘ದಿ ರಾಜಾ ಸಾಬ್’ ಆಗಿ ಬರ್ತಿದ್ದಾರೆ ಪ್ರಭಾಸ್

ತೆಲುಗು ನಟ ಪ್ರಭಾಸ್‍ ಅವರನ್ನು ಆ್ಯಕ್ಷನ್‍ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್‍ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್‍ ಒಂದು ಹಾರರ್‍ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

‘ಕಲ್ಕಿ 2898 AD’ ಚಿತ್ರದ ಯಶಸ್ಸಿನ ಬಳಿಕ ಪ್ರಭಾಸ್‍ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಎದುರಾಗಿದ್ದಾರೆ. ಅದೇ ‘ದಿ ರಾಜ ಸಾಬ್‍’. ‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಒಂದು ಸಣ್ಣ ಟೀಸರ್‍ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ ಬಿಡುಗಡೆಯಾಗಿದೆ.

ಈ ಟೀಸರ್‍ನಲ್ಲಿ ಬರೀ ಪ್ರಭಾಸ್‍ ಅವರ ಪಾತ್ರದ ಪರಿಚಯವನ್ನಷ್ಟೇ ಅಲ್ಲ, ಚಿತ್ರ ಯಾವಾಗ ಬಿಡುಗಡೆ ಎಂಬ ಮಾಹಿತಿಯನ್ನೂ ನೀಡಲಾಗಿದೆ. ಚಿತ್ರವನ್ನು 2025ರ ಏಪ್ರಿಲ್‍ 10ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸುತ್ತಿದೆ. ಪ್ರಭಾಸ್‍ ಅವರ ಹಿಂದಿನ ಚಿತ್ರಗಳಂತೆ ಈ ಚಿತ್ರ ಸಹ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲಿ ನಿರ್ಮಾಣವಾಗಿ ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದೆ.

‘ದಿ ರಾಜ ಸಾಬ್‍’ ಚಿತ್ರಕ್ಕೆ ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್.ಎಸ್. ಥಮನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

21 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

25 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

28 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

30 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

32 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

35 mins ago