ಮನರಂಜನೆ

‘ದಿ ರಾಜಾ ಸಾಬ್’ ಆಗಿ ಬರ್ತಿದ್ದಾರೆ ಪ್ರಭಾಸ್

ತೆಲುಗು ನಟ ಪ್ರಭಾಸ್‍ ಅವರನ್ನು ಆ್ಯಕ್ಷನ್‍ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್‍ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್‍ ಒಂದು ಹಾರರ್‍ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

‘ಕಲ್ಕಿ 2898 AD’ ಚಿತ್ರದ ಯಶಸ್ಸಿನ ಬಳಿಕ ಪ್ರಭಾಸ್‍ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಎದುರಾಗಿದ್ದಾರೆ. ಅದೇ ‘ದಿ ರಾಜ ಸಾಬ್‍’. ‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಒಂದು ಸಣ್ಣ ಟೀಸರ್‍ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ ಬಿಡುಗಡೆಯಾಗಿದೆ.

ಈ ಟೀಸರ್‍ನಲ್ಲಿ ಬರೀ ಪ್ರಭಾಸ್‍ ಅವರ ಪಾತ್ರದ ಪರಿಚಯವನ್ನಷ್ಟೇ ಅಲ್ಲ, ಚಿತ್ರ ಯಾವಾಗ ಬಿಡುಗಡೆ ಎಂಬ ಮಾಹಿತಿಯನ್ನೂ ನೀಡಲಾಗಿದೆ. ಚಿತ್ರವನ್ನು 2025ರ ಏಪ್ರಿಲ್‍ 10ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸುತ್ತಿದೆ. ಪ್ರಭಾಸ್‍ ಅವರ ಹಿಂದಿನ ಚಿತ್ರಗಳಂತೆ ಈ ಚಿತ್ರ ಸಹ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲಿ ನಿರ್ಮಾಣವಾಗಿ ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದೆ.

‘ದಿ ರಾಜ ಸಾಬ್‍’ ಚಿತ್ರಕ್ಕೆ ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್.ಎಸ್. ಥಮನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

43 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

7 hours ago