ಮನರಂಜನೆ

ಪ್ರಭಾಸ್, ಯಶ್ ಮತ್ತು ಸೂರ್ಯ ದಾಖಲೆ ಪುಡಿ ಮಾಡಿದ ರಾಮ್‍ಚರಣ್‍ ತೇಜ

ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದೆ. ಭಾರತೀಯ ಚಿತ್ರವೊಂದರ ಪ್ರೀ-ರಿಲೀಸ್‍ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ನಡೆದಿದ್ದು, ಇದೇ ಮೊದಲು.

ಈ ಮಧ್ಯೆ, ಚಿತ್ರತಂಡದವರು ಮತ್ತು ರಾಮ್‍ಚರಣ್‍ ಅಭಿಮಾನಿಗಳು ಹೊಸದೊಂದು ದಾಖಲೆಯನ್ನು ಮಾಡಿದ್ದಾರೆ. ಚಿತ್ರದ ಇನ್ನೊಂದು ಪ್ರೀ-ರಿಲೀಸ್‍ ಕಾರ್ಯಕ್ರಮವು ಜನವರಿ ಒಂದರಂದು ವಿಜಯವಾಡದಲ್ಲಿ ನಡೆಯಲಿದೆ. ಅಲ್ಲಿನ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ.

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್‌ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದು, ತಮ್ಮ ನೆಚ್ಚಿನ ನಟನ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಸಂಭ್ರಮಿಸಿದ್ದಾರೆ.

ತೆಲುಗಿನ ಜನಪ್ರಿಯ ನಿರ್ಮಾಪಕ ‘ದಿಲ್’ ರಾಜು, ಈ ಚಿತ್ರವನ್ನ ತಮ್ಮ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್‍ನಡಿ ನಿರ್ಮಿಸಿದ್ದಾರೆ. ‘ಗೇಮ್‍ ಚೇಂಜರ್’ ಚಿತ್ರದಲ್ಲಿ ರಾಮ್‍ಚರಣ್‍ ತೇಜ IAS ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಮಿಕ್ಕಂತೆ ಅಂಜಲಿ, ಎಸ್.ಜೆ. ಸೂರ್ಯ, ನಾಸರ್, ಶ್ರೀಕಾಂತ್, ಸಮುದ್ರಕಣಿ, ಜಯರಾಮ್‍, ಸುನೀಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕಾರ್ತಿಕ್‍ ಸುಬ್ಬರಾಜ್‍ ಕಥೆ ಬರೆದಿದ್ದು, ಎಸ್‍.ಎಸ್.ಥಮನ್‍ ಸಂಗೀತ ಮತ್ತು ರತ್ನವೇಲು ಛಾಯಾಗ್ರಹಣ ಈ ಚಿತ್ರಕ್ಕಿದೆ.

 

 

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

7 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

7 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

8 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

8 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

8 hours ago