ಮನರಂಜನೆ

ಪ್ರಭಾಸ್, ಯಶ್ ಮತ್ತು ಸೂರ್ಯ ದಾಖಲೆ ಪುಡಿ ಮಾಡಿದ ರಾಮ್‍ಚರಣ್‍ ತೇಜ

ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದೆ. ಭಾರತೀಯ ಚಿತ್ರವೊಂದರ ಪ್ರೀ-ರಿಲೀಸ್‍ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ನಡೆದಿದ್ದು, ಇದೇ ಮೊದಲು.

ಈ ಮಧ್ಯೆ, ಚಿತ್ರತಂಡದವರು ಮತ್ತು ರಾಮ್‍ಚರಣ್‍ ಅಭಿಮಾನಿಗಳು ಹೊಸದೊಂದು ದಾಖಲೆಯನ್ನು ಮಾಡಿದ್ದಾರೆ. ಚಿತ್ರದ ಇನ್ನೊಂದು ಪ್ರೀ-ರಿಲೀಸ್‍ ಕಾರ್ಯಕ್ರಮವು ಜನವರಿ ಒಂದರಂದು ವಿಜಯವಾಡದಲ್ಲಿ ನಡೆಯಲಿದೆ. ಅಲ್ಲಿನ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ.

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್‌ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದು, ತಮ್ಮ ನೆಚ್ಚಿನ ನಟನ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಸಂಭ್ರಮಿಸಿದ್ದಾರೆ.

ತೆಲುಗಿನ ಜನಪ್ರಿಯ ನಿರ್ಮಾಪಕ ‘ದಿಲ್’ ರಾಜು, ಈ ಚಿತ್ರವನ್ನ ತಮ್ಮ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್‍ನಡಿ ನಿರ್ಮಿಸಿದ್ದಾರೆ. ‘ಗೇಮ್‍ ಚೇಂಜರ್’ ಚಿತ್ರದಲ್ಲಿ ರಾಮ್‍ಚರಣ್‍ ತೇಜ IAS ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಮಿಕ್ಕಂತೆ ಅಂಜಲಿ, ಎಸ್.ಜೆ. ಸೂರ್ಯ, ನಾಸರ್, ಶ್ರೀಕಾಂತ್, ಸಮುದ್ರಕಣಿ, ಜಯರಾಮ್‍, ಸುನೀಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕಾರ್ತಿಕ್‍ ಸುಬ್ಬರಾಜ್‍ ಕಥೆ ಬರೆದಿದ್ದು, ಎಸ್‍.ಎಸ್.ಥಮನ್‍ ಸಂಗೀತ ಮತ್ತು ರತ್ನವೇಲು ಛಾಯಾಗ್ರಹಣ ಈ ಚಿತ್ರಕ್ಕಿದೆ.

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

8 mins ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

15 mins ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

21 mins ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

25 mins ago

ಒಳಮೀಸಲಾತಿಯಲ್ಲಿ ಬಲಗೈಗೆ ಅನ್ಯಾಯ : ಮಾ.25ಕ್ಕೆ ಬೆಂಗಳೂರಲ್ಲಿ ಬೃಹತ್‌ ಸಮಾವೇಶ

ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…

32 mins ago