ಮನರಂಜನೆ

ಪ್ರಭಾಸ್, ಯಶ್ ಮತ್ತು ಸೂರ್ಯ ದಾಖಲೆ ಪುಡಿ ಮಾಡಿದ ರಾಮ್‍ಚರಣ್‍ ತೇಜ

ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದೆ. ಭಾರತೀಯ ಚಿತ್ರವೊಂದರ ಪ್ರೀ-ರಿಲೀಸ್‍ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ನಡೆದಿದ್ದು, ಇದೇ ಮೊದಲು.

ಈ ಮಧ್ಯೆ, ಚಿತ್ರತಂಡದವರು ಮತ್ತು ರಾಮ್‍ಚರಣ್‍ ಅಭಿಮಾನಿಗಳು ಹೊಸದೊಂದು ದಾಖಲೆಯನ್ನು ಮಾಡಿದ್ದಾರೆ. ಚಿತ್ರದ ಇನ್ನೊಂದು ಪ್ರೀ-ರಿಲೀಸ್‍ ಕಾರ್ಯಕ್ರಮವು ಜನವರಿ ಒಂದರಂದು ವಿಜಯವಾಡದಲ್ಲಿ ನಡೆಯಲಿದೆ. ಅಲ್ಲಿನ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ.

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್‌ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದು, ತಮ್ಮ ನೆಚ್ಚಿನ ನಟನ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಸಂಭ್ರಮಿಸಿದ್ದಾರೆ.

ತೆಲುಗಿನ ಜನಪ್ರಿಯ ನಿರ್ಮಾಪಕ ‘ದಿಲ್’ ರಾಜು, ಈ ಚಿತ್ರವನ್ನ ತಮ್ಮ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್‍ನಡಿ ನಿರ್ಮಿಸಿದ್ದಾರೆ. ‘ಗೇಮ್‍ ಚೇಂಜರ್’ ಚಿತ್ರದಲ್ಲಿ ರಾಮ್‍ಚರಣ್‍ ತೇಜ IAS ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಮಿಕ್ಕಂತೆ ಅಂಜಲಿ, ಎಸ್.ಜೆ. ಸೂರ್ಯ, ನಾಸರ್, ಶ್ರೀಕಾಂತ್, ಸಮುದ್ರಕಣಿ, ಜಯರಾಮ್‍, ಸುನೀಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕಾರ್ತಿಕ್‍ ಸುಬ್ಬರಾಜ್‍ ಕಥೆ ಬರೆದಿದ್ದು, ಎಸ್‍.ಎಸ್.ಥಮನ್‍ ಸಂಗೀತ ಮತ್ತು ರತ್ನವೇಲು ಛಾಯಾಗ್ರಹಣ ಈ ಚಿತ್ರಕ್ಕಿದೆ.

 

 

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

2 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

2 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

2 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

2 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

2 hours ago