ಮನರಂಜನೆ

ಪ್ರಭಾಸ್, ಯಶ್ ಮತ್ತು ಸೂರ್ಯ ದಾಖಲೆ ಪುಡಿ ಮಾಡಿದ ರಾಮ್‍ಚರಣ್‍ ತೇಜ

ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದೆ. ಭಾರತೀಯ ಚಿತ್ರವೊಂದರ ಪ್ರೀ-ರಿಲೀಸ್‍ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ನಡೆದಿದ್ದು, ಇದೇ ಮೊದಲು.

ಈ ಮಧ್ಯೆ, ಚಿತ್ರತಂಡದವರು ಮತ್ತು ರಾಮ್‍ಚರಣ್‍ ಅಭಿಮಾನಿಗಳು ಹೊಸದೊಂದು ದಾಖಲೆಯನ್ನು ಮಾಡಿದ್ದಾರೆ. ಚಿತ್ರದ ಇನ್ನೊಂದು ಪ್ರೀ-ರಿಲೀಸ್‍ ಕಾರ್ಯಕ್ರಮವು ಜನವರಿ ಒಂದರಂದು ವಿಜಯವಾಡದಲ್ಲಿ ನಡೆಯಲಿದೆ. ಅಲ್ಲಿನ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ.

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್‌ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದು, ತಮ್ಮ ನೆಚ್ಚಿನ ನಟನ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಸಂಭ್ರಮಿಸಿದ್ದಾರೆ.

ತೆಲುಗಿನ ಜನಪ್ರಿಯ ನಿರ್ಮಾಪಕ ‘ದಿಲ್’ ರಾಜು, ಈ ಚಿತ್ರವನ್ನ ತಮ್ಮ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್‍ನಡಿ ನಿರ್ಮಿಸಿದ್ದಾರೆ. ‘ಗೇಮ್‍ ಚೇಂಜರ್’ ಚಿತ್ರದಲ್ಲಿ ರಾಮ್‍ಚರಣ್‍ ತೇಜ IAS ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಮಿಕ್ಕಂತೆ ಅಂಜಲಿ, ಎಸ್.ಜೆ. ಸೂರ್ಯ, ನಾಸರ್, ಶ್ರೀಕಾಂತ್, ಸಮುದ್ರಕಣಿ, ಜಯರಾಮ್‍, ಸುನೀಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕಾರ್ತಿಕ್‍ ಸುಬ್ಬರಾಜ್‍ ಕಥೆ ಬರೆದಿದ್ದು, ಎಸ್‍.ಎಸ್.ಥಮನ್‍ ಸಂಗೀತ ಮತ್ತು ರತ್ನವೇಲು ಛಾಯಾಗ್ರಹಣ ಈ ಚಿತ್ರಕ್ಕಿದೆ.

 

 

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

30 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

48 mins ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

22 hours ago