ರಾಮ್ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆದಿದೆ. ಭಾರತೀಯ ಚಿತ್ರವೊಂದರ ಪ್ರೀ-ರಿಲೀಸ್ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ನಡೆದಿದ್ದು, ಇದೇ ಮೊದಲು.
ಈ ಮಧ್ಯೆ, ಚಿತ್ರತಂಡದವರು ಮತ್ತು ರಾಮ್ಚರಣ್ ಅಭಿಮಾನಿಗಳು ಹೊಸದೊಂದು ದಾಖಲೆಯನ್ನು ಮಾಡಿದ್ದಾರೆ. ಚಿತ್ರದ ಇನ್ನೊಂದು ಪ್ರೀ-ರಿಲೀಸ್ ಕಾರ್ಯಕ್ರಮವು ಜನವರಿ ಒಂದರಂದು ವಿಜಯವಾಡದಲ್ಲಿ ನಡೆಯಲಿದೆ. ಅಲ್ಲಿನ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರಾಮ್ಚರಣ್ ಅವರ 256 ಅಡಿ ಎತ್ತರದ ಕಟೌಟ್ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ.
ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದು, ತಮ್ಮ ನೆಚ್ಚಿನ ನಟನ 256 ಅಡಿ ಎತ್ತರದ ಕಟೌಟ್ ನಿಲ್ಲಿಸಿ ಸಂಭ್ರಮಿಸಿದ್ದಾರೆ.
ತೆಲುಗಿನ ಜನಪ್ರಿಯ ನಿರ್ಮಾಪಕ ‘ದಿಲ್’ ರಾಜು, ಈ ಚಿತ್ರವನ್ನ ತಮ್ಮ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ನಡಿ ನಿರ್ಮಿಸಿದ್ದಾರೆ. ‘ಗೇಮ್ ಚೇಂಜರ್’ ಚಿತ್ರದಲ್ಲಿ ರಾಮ್ಚರಣ್ ತೇಜ IAS ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಮಿಕ್ಕಂತೆ ಅಂಜಲಿ, ಎಸ್.ಜೆ. ಸೂರ್ಯ, ನಾಸರ್, ಶ್ರೀಕಾಂತ್, ಸಮುದ್ರಕಣಿ, ಜಯರಾಮ್, ಸುನೀಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದು, ಎಸ್.ಎಸ್.ಥಮನ್ ಸಂಗೀತ ಮತ್ತು ರತ್ನವೇಲು ಛಾಯಾಗ್ರಹಣ ಈ ಚಿತ್ರಕ್ಕಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…