ಪ್ರಜ್ವಲ್ ದೇವರಾಜ್ ಅಭಿನಯದಲ್ಲಿ ನಿರ್ದೇಶಕ ಲೋಹಿತ್, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲೇ ಇಲ್ಲ. ಈಗ ಆ ಚಿತ್ರ ಬಿಡುಗಡೆಗೂ ಮೊದಲೇ, ಈ ಜೋಡಿ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದೆ. ಅದು ‘ರಾಕ್ಷಸ’ ಚಿತ್ರದ ಮೂಲಕ.
‘ರಾಕ್ಷಸ’ ಚಿತ್ರವು ಒಂದು ಹಾರರ್ ಚಿತ್ರವಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್ ಈ ಶೈಲಿಯ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಭಾವನಾತ್ಮಕ ಕಥೆಯ ಜೊತೆಗೆ ಟೈಮ್ ಲೂಪ್ ಪರಿಕಲ್ಪನೆಯೂ ಇದೆಯಂತೆ. ಈ ಹಿಂದೆ ‘ಮಮ್ಮಿ’, ‘ದೇವಕಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್ಗೆ ಇದು ಪ್ರಜ್ವಲ್ ಜೊತೆಗೆ ಎರಡನೇ ಚಿತ್ರ.
ಈ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಬಿಡುಗಡೆ ಆಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ‘UI’ ಮತ್ತು ‘ಮ್ಯಾಕ್ಸ್’ ಚಿತ್ರಗಳು ಬಿಡುಗಡೆಯಾದ ಕಾರಣ, ಚಿತ್ರವು ಈ ವರ್ಷಕ್ಕೆ ಮುಂದೂಲ್ಪಟ್ಟಿತ್ತು. ಈಗ ಚಿತ್ರದ ಬಿಡುಗಡೆಗೆ ಮುಹೂರ್ತ ಸಿಕ್ಕಿದ್ದು, ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರವು ಫೆ..26ರಂದು ಚಿತ್ರ ಬಿಡುಗಡೆಯಾಗಲಿದೆ.
ಪ್ರಜ್ವಲ್ ಜೊತೆಗೆ ಈ ಚಿತ್ರದಲ್ಲಿ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ‘ರಾಕ್ಷಸ’ ಸಿನಿಮಾದ ಶೇ.80ರಷ್ಟು ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿರುವುದು ವಿಶೇಷ. ಪೊಲೀಸ್ ಸ್ಟೇಷನ್ ಸೆಟ್ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ರಾಮೇಶ್ವರಂ, ಗೋವಾ ಮತ್ತು ಬೆಂಗಳೂರಿನಲ್ಲಿ ಉಳಿದ ಭಾಗದ ಚಿತ್ರೀಕರಣ ನಡೆಸಲಾಗಿದೆಯಂತೆ.
ಶಾನ್ವಿ ಎಂಟರ್ಟೈನ್ಮೆಂಟ್ ನಡಿ ದೀಪು ಬಿ.ಎಸ್ ನಿರ್ಮಿಸಿರುವ ಈ ಚಿತ್ರದ ನಿರ್ಮಾಣದಲ್ಲಿ ನವೀನ್ ಹಾಗೂ ಮಾನಸ ಕೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಮತ್ತು ವರುಣ್ ಉನ್ನಿ ಸಂಗೀತ ನಿರ್ದೇಶನವಿದೆ.
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…