ಮನರಂಜನೆ

ಶಿವರಾತ್ರಿಗೆ ‘ರಾಕ್ಷಸ’ನ ಅವತಾರದಲ್ಲಿ ಪ್ರಜ್ವಲ್‍ ಆಗಮನ ‌

ಪ್ರಜ್ವಲ್‍ ದೇವರಾಜ್‍ ಅಭಿನಯದಲ್ಲಿ ನಿರ್ದೇಶಕ ಲೋಹಿತ್‍, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲೇ ಇಲ್ಲ. ಈಗ ಆ ಚಿತ್ರ ಬಿಡುಗಡೆಗೂ ಮೊದಲೇ, ಈ ಜೋಡಿ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದೆ. ಅದು ‘ರಾಕ್ಷಸ’ ಚಿತ್ರದ ಮೂಲಕ.

‘ರಾಕ್ಷಸ’ ಚಿತ್ರವು ಒಂದು ಹಾರರ್‍ ಚಿತ್ರವಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್‍ ಈ ಶೈಲಿಯ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಭಾವನಾತ್ಮಕ ಕಥೆಯ ಜೊತೆಗೆ ಟೈಮ್‌ ಲೂಪ್‌ ಪರಿಕಲ್ಪನೆಯೂ ಇದೆಯಂತೆ. ಈ ಹಿಂದೆ ‘ಮಮ್ಮಿ’, ‘ದೇವಕಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್‍ಗೆ ಇದು ಪ್ರಜ್ವಲ್‍ ಜೊತೆಗೆ ಎರಡನೇ ಚಿತ್ರ.

ಈ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಬಿಡುಗಡೆ ಆಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ‘UI’ ಮತ್ತು ‘ಮ್ಯಾಕ್ಸ್’ ಚಿತ್ರಗಳು ಬಿಡುಗಡೆಯಾದ ಕಾರಣ, ಚಿತ್ರವು ಈ ವರ್ಷಕ್ಕೆ ಮುಂದೂಲ್ಪಟ್ಟಿತ್ತು. ಈಗ ಚಿತ್ರದ ಬಿಡುಗಡೆಗೆ ಮುಹೂರ್ತ ಸಿಕ್ಕಿದ್ದು, ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರವು ಫೆ..26ರಂದು ಚಿತ್ರ ಬಿಡುಗಡೆಯಾಗಲಿದೆ.

ಪ್ರಜ್ವಲ್ ಜೊತೆಗೆ ಈ ಚಿತ್ರದಲ್ಲಿ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ‘ರಾಕ್ಷಸ’ ಸಿನಿಮಾದ ಶೇ.80ರಷ್ಟು ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿರುವುದು ವಿಶೇಷ. ಪೊಲೀಸ್ ಸ್ಟೇಷನ್‍ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ರಾಮೇಶ್ವರಂ, ಗೋವಾ ಮತ್ತು ಬೆಂಗಳೂರಿನಲ್ಲಿ ಉಳಿದ ಭಾಗದ ಚಿತ್ರೀಕರಣ ನಡೆಸಲಾಗಿದೆಯಂತೆ.

ಶಾನ್ವಿ ಎಂಟರ್‌ಟೈನ್‌ಮೆಂಟ್‌ ನಡಿ ದೀಪು ಬಿ.ಎಸ್ ನಿರ್ಮಿಸಿರುವ ಈ ಚಿತ್ರದ ನಿರ್ಮಾಣದಲ್ಲಿ ನವೀನ್ ಹಾಗೂ ಮಾನಸ ಕೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಮತ್ತು ವರುಣ್ ಉನ್ನಿ ಸಂಗೀತ ನಿರ್ದೇಶನವಿದೆ.

 

 

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago