ಮನರಂಜನೆ

ಶಿವರಾತ್ರಿಗೆ ‘ರಾಕ್ಷಸ’ನ ಅವತಾರದಲ್ಲಿ ಪ್ರಜ್ವಲ್‍ ಆಗಮನ ‌

ಪ್ರಜ್ವಲ್‍ ದೇವರಾಜ್‍ ಅಭಿನಯದಲ್ಲಿ ನಿರ್ದೇಶಕ ಲೋಹಿತ್‍, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲೇ ಇಲ್ಲ. ಈಗ ಆ ಚಿತ್ರ ಬಿಡುಗಡೆಗೂ ಮೊದಲೇ, ಈ ಜೋಡಿ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದೆ. ಅದು ‘ರಾಕ್ಷಸ’ ಚಿತ್ರದ ಮೂಲಕ.

‘ರಾಕ್ಷಸ’ ಚಿತ್ರವು ಒಂದು ಹಾರರ್‍ ಚಿತ್ರವಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್‍ ಈ ಶೈಲಿಯ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಭಾವನಾತ್ಮಕ ಕಥೆಯ ಜೊತೆಗೆ ಟೈಮ್‌ ಲೂಪ್‌ ಪರಿಕಲ್ಪನೆಯೂ ಇದೆಯಂತೆ. ಈ ಹಿಂದೆ ‘ಮಮ್ಮಿ’, ‘ದೇವಕಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್‍ಗೆ ಇದು ಪ್ರಜ್ವಲ್‍ ಜೊತೆಗೆ ಎರಡನೇ ಚಿತ್ರ.

ಈ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಬಿಡುಗಡೆ ಆಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ‘UI’ ಮತ್ತು ‘ಮ್ಯಾಕ್ಸ್’ ಚಿತ್ರಗಳು ಬಿಡುಗಡೆಯಾದ ಕಾರಣ, ಚಿತ್ರವು ಈ ವರ್ಷಕ್ಕೆ ಮುಂದೂಲ್ಪಟ್ಟಿತ್ತು. ಈಗ ಚಿತ್ರದ ಬಿಡುಗಡೆಗೆ ಮುಹೂರ್ತ ಸಿಕ್ಕಿದ್ದು, ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರವು ಫೆ..26ರಂದು ಚಿತ್ರ ಬಿಡುಗಡೆಯಾಗಲಿದೆ.

ಪ್ರಜ್ವಲ್ ಜೊತೆಗೆ ಈ ಚಿತ್ರದಲ್ಲಿ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ‘ರಾಕ್ಷಸ’ ಸಿನಿಮಾದ ಶೇ.80ರಷ್ಟು ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿರುವುದು ವಿಶೇಷ. ಪೊಲೀಸ್ ಸ್ಟೇಷನ್‍ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ರಾಮೇಶ್ವರಂ, ಗೋವಾ ಮತ್ತು ಬೆಂಗಳೂರಿನಲ್ಲಿ ಉಳಿದ ಭಾಗದ ಚಿತ್ರೀಕರಣ ನಡೆಸಲಾಗಿದೆಯಂತೆ.

ಶಾನ್ವಿ ಎಂಟರ್‌ಟೈನ್‌ಮೆಂಟ್‌ ನಡಿ ದೀಪು ಬಿ.ಎಸ್ ನಿರ್ಮಿಸಿರುವ ಈ ಚಿತ್ರದ ನಿರ್ಮಾಣದಲ್ಲಿ ನವೀನ್ ಹಾಗೂ ಮಾನಸ ಕೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಮತ್ತು ವರುಣ್ ಉನ್ನಿ ಸಂಗೀತ ನಿರ್ದೇಶನವಿದೆ.

 

 

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

10 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago