ಮನರಂಜನೆ

ಸಿನಿಮಾ ನಿರ್ಮಾಣದತ್ತ ಪ್ರಜ್ವಲ್: ಪುರಾತನ ಫಿಲಂಸ್‍ ಜೊತೆ ನಿರ್ಮಾಣ

ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್‍, ಡೈನಾಮಿಕ್‍ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ ಪ್ರಜ್ವಲ್‍ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಪ್ರಜ್ವಲ್‍ ಸಹ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಪ್ರಜ್ವಲ್‍ ಸಹೋದರ ಪ್ರಣಾಮ್‍ ಅಭಿನಯದ ಮೊದಲ ಚಿತ್ರ ‘ಸನ್‍ ಆಫ್‍ ಮುತ್ತಣ್ಣ’ ಇದೇ ಶುಕ್ರವಾರ (ಸೆ.12) ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಪುರಾತನ ಫಿಲಂಸ್‍ ನಿರ್ಮಾಣ ಮಾಡುತ್ತಿದೆ. ‌ಕನ್ನಡ ಪ್ರೇಕ್ಷಕರಿಗೆ ಸದಭಿರುಚಿಯ ಸಿನಿಮಾಗಳ ಮೂಲಕ ಉತ್ತಮ ಮನರಂಜನೆ ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂಸ್ಥೆ ಇದೀಗ ಪ್ರಜ್ವಲ್‍ ದೇವರಾಜ್‍ ಜೊತೆಗೆ ಕೈಜೋಡಿಸಿದೆ.

ಪುರಾತನ ಫಿಲಂಸ್ ಮುಂದಿನ ದಿನಗಳಲ್ಲಿ ನಟ ಪ್ರಜ್ವಲ್ ಜೊತೆಗೆ ಸೇರಿ ನಿರ್ಮಾಣ ಮಾಡಲು ಮುಂದಾಗಿದೆ. ಪುರಾತನ ಫಿಲಂಸ್ ಹಾಗೂ ಪ್ರಜ್ವಲ್ ದೇವರಾಜ್ ಸೇರಿ P2 ಪ್ರೊಡಕ್ಷನ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಇದರ ಮೂಲಕ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಮತ್ತು ಒಳ್ಳೆಯ ಕಥೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಲಿದೆ.

ಈ ಸಂಸ್ಥೆಯ ಮೊದಲ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಪ್ರಣಾಮ್‍ ನಾಯಕನಾಗಿ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ‘ಸನ್‍ ಆಫ್‍ ಮುತ್ತಣ್ಣ’ ಚಿತ್ರೀಕರಣ ಮುಗಿಯುತ್ತಿದ್ದಂತೆ, ಆ ತಂಡದ ಜೊತೆಗೆ ಇನ್ನೊಂದು ಚಿತ್ರ ಮಾಡುವುದಾಗಿ ಪುರಾತನ ಫಿಲಂಸ್‍ ಘೋಷಿಸಿತ್ತು. ಅದರಂತೆ ಈ ಚಿತ್ರದಲ್ಲೂ ಪ್ರಣಾಮ್‍ ನಾಯಕನಾಗಿ ನಟಿಸಲಿದ್ದು, ಶ್ರೀಕಾಂತ್‍ ಹುಣಸೂರು ನಿರ್ದೇಶಿಸುವ ಸಾಧ್ಯತೆ ಇದೆ. ಸದ್ಯದಲ್ಲೇ ಪಿ2 ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

1 hour ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

5 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

22 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

22 hours ago