ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್, ಡೈನಾಮಿಕ್ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ ಪ್ರಜ್ವಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಪ್ರಜ್ವಲ್ ಸಹ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.
ಪ್ರಜ್ವಲ್ ಸಹೋದರ ಪ್ರಣಾಮ್ ಅಭಿನಯದ ಮೊದಲ ಚಿತ್ರ ‘ಸನ್ ಆಫ್ ಮುತ್ತಣ್ಣ’ ಇದೇ ಶುಕ್ರವಾರ (ಸೆ.12) ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಪುರಾತನ ಫಿಲಂಸ್ ನಿರ್ಮಾಣ ಮಾಡುತ್ತಿದೆ. ಕನ್ನಡ ಪ್ರೇಕ್ಷಕರಿಗೆ ಸದಭಿರುಚಿಯ ಸಿನಿಮಾಗಳ ಮೂಲಕ ಉತ್ತಮ ಮನರಂಜನೆ ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂಸ್ಥೆ ಇದೀಗ ಪ್ರಜ್ವಲ್ ದೇವರಾಜ್ ಜೊತೆಗೆ ಕೈಜೋಡಿಸಿದೆ.
ಪುರಾತನ ಫಿಲಂಸ್ ಮುಂದಿನ ದಿನಗಳಲ್ಲಿ ನಟ ಪ್ರಜ್ವಲ್ ಜೊತೆಗೆ ಸೇರಿ ನಿರ್ಮಾಣ ಮಾಡಲು ಮುಂದಾಗಿದೆ. ಪುರಾತನ ಫಿಲಂಸ್ ಹಾಗೂ ಪ್ರಜ್ವಲ್ ದೇವರಾಜ್ ಸೇರಿ P2 ಪ್ರೊಡಕ್ಷನ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಇದರ ಮೂಲಕ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಮತ್ತು ಒಳ್ಳೆಯ ಕಥೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಲಿದೆ.
ಈ ಸಂಸ್ಥೆಯ ಮೊದಲ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಪ್ರಣಾಮ್ ನಾಯಕನಾಗಿ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ‘ಸನ್ ಆಫ್ ಮುತ್ತಣ್ಣ’ ಚಿತ್ರೀಕರಣ ಮುಗಿಯುತ್ತಿದ್ದಂತೆ, ಆ ತಂಡದ ಜೊತೆಗೆ ಇನ್ನೊಂದು ಚಿತ್ರ ಮಾಡುವುದಾಗಿ ಪುರಾತನ ಫಿಲಂಸ್ ಘೋಷಿಸಿತ್ತು. ಅದರಂತೆ ಈ ಚಿತ್ರದಲ್ಲೂ ಪ್ರಣಾಮ್ ನಾಯಕನಾಗಿ ನಟಿಸಲಿದ್ದು, ಶ್ರೀಕಾಂತ್ ಹುಣಸೂರು ನಿರ್ದೇಶಿಸುವ ಸಾಧ್ಯತೆ ಇದೆ. ಸದ್ಯದಲ್ಲೇ ಪಿ2 ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…