ಮನರಂಜನೆ

ಕನ್ನಡ ಚಿತ್ರರಂಗ ಬಹಳ ಹಿಂದುಳಿದಿದೆ ಎಂದ ಪ್ರಕಾಶ್‍ ಬೆಳವಾಡಿ

ಕನ್ನಡ ಚಿತ್ರರಂಗ ಮತ್ತು ಇಲ್ಲಿಯ ಕೆಲವು ಬೆಳವಣಿಗೆಗಳ ಕುರಿತು ಕಲಾವಿದರು ಮತ್ತು ತಂತ್ರಜ್ಞರು ಆಗಾಗ ಬೇಸರ ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ನಟ-ನಿರ್ದೇಶಕ ಪ್ರಕಾಶ್‍ ಬೆಳವಾಡಿ, ಕನ್ನಡ ಚಿತ್ರರಂಗದ ಬಗ್ಗೆ ಬೇಸರದಿಂದ ಮಾತನಾಡಿದ್ದಾರೆ. ಬಹುಭಾಷೆಗಳಲ್ಲಿ ನಟಿಸುತ್ತಿರುವ ಅವರು, ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡ ಚಿತ್ರರಂಗ ಬಹಳ ಹಿಂದುಳಿದಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ, Rapid Rashmi ನಡೆಸಿಕೊಡುವ ‘ಜಸ್ಟ್ ಕ್ಯೂರಿಯಸ್‍’ ಎಂಬ ಪಾಡ್‍ಕಾಸ್ಟ್ನಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಕನ್ನಡ ಚಿತ್ರರಂಗ ಹೇಗಿದೆ ಮತ್ತು ಎತ್ತ ಸಾಗುತ್ತಿದೆ ಎಂಬುದರ ಬಗ್ಗೆ ಉದಾಹರಣೆ ಸಮೇತ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಕನ್ನಡದಲ್ಲಿ ನಾನೊಂದು ದೊಡ್ಡ ನಿರ್ಮಾಣ ಸಂಸ್ಥೆಯೊಂದರ ಚಿತ್ರದಲ್ಲಿ ನಟಿಸಿದ್ದೆ. ನಿರ್ದೇಶಕರಿಗೆ ನನಗೆ ಅಷ್ಟೊಂದು ಸಂಭಾವನೆ ಕೊಡುವುದಕ್ಕೆ ಇಷ್ಟವಿರಲಿಲ್ಲ. ಸಂಭಾವನೆ ಕಡಿಮೆ ಮಾಡಿಕೊಳ್ಳುವುದಕ್ಕೆ ನಾನು ತಯಾರಿರಲಿಲ್ಲ. ನಾಲ್ಕು ಕಂತಿನಲ್ಲಿ ಸಂಭಾವನೆ ಕೊಡುವುದಾಗಿ ಹೇಳಿ ಕೊನೆಯ ಕಂತಿನ ಸಂಭಾವನೆ ಕೊಡಲಿಲ್ಲ. ಕೊನೆಯ ದಿನದ ಚಿತ್ರೀಕರಣ ಸಂದರ್ಭದಲ್ಲಿ ಯಾರೋ ನಾಲ್ವರನ್ನು ನನ್ನ ಕ್ಯಾರಾವಾನ್‍ಗೆ ಕಳುಹಿಸಿದರು. ಅವರು ಚೆನ್ನಾಗಿ ಮಾಂಸ ತಿಂದು, ಟಾಯ್ಲೆಟ್‍ಗೆ ಹೋಗಿ ಗಲೀಜು ಮಾಡಿ ಬಂದರು. ಒಳಗೆ ಉಸಿರುಗಟ್ಟಿಸುವಂತಿತ್ತು. ನನಗೆ ಒಳಗಡೆ ಕೂರುವುದಕ್ಕೆ ಸಾಧ್ಯವಾಗಲಿಲ್ಲ. ಕೊನೆಗೆ ಹೊರಗೆ ಹೋಗಿ ಬಿಸಿಲಿನಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಬಂತು’ ಎಂದಿದ್ದಾರೆ.

ಆ ನಿರ್ಮಾಣ ಸಂಸ್ಥೆ ಯಾವದು ಎಂದು ಬಹಿರಂಗಪಡಿಸದ ಅವರು, ಆ ಸಂಸ್ಥೆಯವರನ್ನು ಕಂಡರೆ ತನಗೆ ಭಯ ಮತ್ತು ಇನ್ನೆಂದೂ ಅವರ ಚಿತ್ರಗಳಲ್ಲಿ ನಟಿಸುವುದಿಲ್ಲ ಎಂದು ಹೇಳಿದ್ದಾರೆ. ‘ಯಾರು, ಯಾವ ಸಂಸ್ಥೆ ಎಂಬ ಹೆಸರು ಬೇಡ. ಅವರ ಕಂಡರೆ ನನಗೆ ಭಯ. ಮತ್ತೊಮ್ಮೆ ಅವಕಾಶ ಕೊಡುತ್ತಾರೋ, ಇಲ್ಲವೋ ಎಂಬ ಭಯವಲ್ಲ. ಅವಕಾಶ ಕೊಟ್ಟರೂ, ನಾನು ಅವರ ಸಂಸ್ಥೆಯ ಚಿತ್ರಗಳಲ್ಲಿ ಇನ್ನು ಮುಂದೆ ನಟಿಸುವುದಿಲ್ಲ. ದಿನಕ್ಕೆ 10 ಲಕ್ಷ ರೂ. ಸಂಭಾವನೆ ಕೊಟ್ಟರೂ ನನಗೆ ಅವರ ಚಿತ್ರ ಬೇಡ’ ಎಂದಿದ್ದಾರೆ.

ಇದು ಅತಿರೇಕದ ವರ್ತನೆ, ಎಲ್ಲರೂ ಆ ರೀತಿ ಇರುವುದಿಲ್ಲ ಎಂದಿರುವ ಪ್ರಕಾಶ್‍ ಬೆಳವಾಡಿ, ‘ಇಲ್ಲಿ ಬಹಳಷ್ಟು ಜನರಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದೇ ಗೊತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ಕಾಂಟ್ರಾಕ್ಟ್ (ಕರಾರು) ಅನ್ನುವುದೇ ಇಲ್ಲ. ಬೇರೆ ಎಲ್ಲಾ ಚಿತ್ರರಂಗಗಳಲ್ಲೂ ಇದೆ. ಕನ್ನಡ ಚಿತ್ರರಂಗದಲ್ಲಿ ಮಾತ್ರ ಕಾಂಟ್ರಾಕ್ಟ್ ಎಂಬುದಿಲ್ಲ. ನಾವು ಬಹಳ ಹಿಂದುಳಿದಿದ್ದೇವೆ. ಇದೊಂದು ಅನಾಗರೀಕ ಚಿತ್ರರಂಗ’ ಎಂದು ಬೇಸರವನ್ನು ಹೊರಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

42 mins ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

44 mins ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

46 mins ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

4 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

4 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago