ಮನರಂಜನೆ

ನಿರ್ದಿಗಂತಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಪಡೆದಿಲ್ಲ: ಪ್ರಕಾಶ್‍ ರೈ

ಶ್ರೀರಂಗಪಟ್ಟಣದ ಬಳಿ ನಟ ಪ್ರಕಾಶ್ ರೈ, ನಿರ್ದಿಗಂತ ಎಂಬ ರಂಗಶಾಲೆಯನ್ನು ಪ್ರಾರಂಭಿಸಿದ್ದು ಗೊತ್ತೇ ಇದೆ. ಕಳೆದ ಒಂದು ವರ್ಷದಿಂದ ಈ ರಂಗಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಈ ಶಾಲೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಹಲವು ಚಟುವಟಿಕೆಗಳ ಮೂಲಕ ಪ್ರಕಾಶ್‍ ರೈ ಆಚರಿಸಿದ್ದಾರೆ.

ಪ್ರಕಾಶ್‍ ರೈ, ನಿರ್ದಿಗಂತವನ್ನು ಸರ್ಕಾರದ ಅನುದಾನ ಪಡೆದು ನಿರ್ಮಿಸಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಪ್ರಕಾಶ್ ರೈ ಅವರು ಕಾಂಗ್ರೆಸ್‍ ಪಕ್ಷಕ್ಕೆ ಹತ್ತಿರವಿರುವುದರಿಂದ ಈ ಶಾಲೆ ನಿರ್ಮಿಸುವುದಕ್ಕೆ ಸರ್ಕಾರದಿಂದ ಅನುದಾನ ಮತ್ತು ಜಾಗ ಸಿಕ್ಕಿದೆ ಎಂಬಂತಹ ಮಾತುಗಳು ಕೇಳಿಬಂದಿದ್ದವು. ಆದರೆ, ಅದು ಶುದ್ಧ ಸುಳ್ಳು ಎನ್ನುತ್ತಾರೆ ಅವರು.

ಈ ಕುರಿತು ಮಾತನಾಡಿರುವ ಅವರು, ‘ನಾನು ಸರ್ಕಾರದಿಂದ ಯಾವುದೇ ಅನುದಾನ ಪಡೆದಿಲ್ಲ. ಇದು ನಮ್ಮ ದುಡ್ಡಿನಿಂದ ಕಟ್ಟಿದ ಒಂದು ಸಂಸ್ಥೆ. ಈ ರೀತಿಯಾಗಿ ಹಲವು ಕೆಲಸಗಳನ್ನು ಸ್ವಂತ ದುಡ್ಡಿನಿಂದ ಮಾಡುತ್ತಿದ್ದೇನೆ. ಸರಕಾರದಿಂದ ಅನುಮತಿ ಬಿಟ್ಟರೆ ಬೇರೇನನ್ನೂ ಕೇಳಿಲ್ಲ. ನಿಜ ಹೇಳಬೇಕೆಂದರೆ, 40 ಸಾವಿರ ಅನುದಾನ ಕೊಡುವುದಕ್ಕೆ ತಯಾರಿದ್ದರು. ಆದರೆ, ಒಂದೂವರೆ ಎರಡು ಕೋಟಿ ರೂ ಹಾಕಿ 40 ಸಾವಿರ ಅನುದಾನ ಪಡೆಯುವ ಅವಶ್ಯಕತೆ ಇಲ್ಲ’ ಎಂದು ಹೇಳಿದರು.

ಇನ್ನು, ನಿರ್ದಿಗಂತದ ಕುರಿತು ಮಾತನಾಡುವ ಅವರು, ‘ಇದೊಂದು ರಂಗಶಾಲೆ ಎನ್ನುವುದಕ್ಕಿಂತ ರಂಗಭೂಮಿಯ ಕಲಾವಿದರಿಗೆ ಕಾವುಗೂಡು ಎನ್ನುವುದು ಸರಿಯಾದ ಪದ. ನಾನು ರಂಗಭೂಮಿಯಿಂದ ಬಂದವನು. ರಂಗಭೂಮಿಗೆ ಏನಾದರೂ ವಾಪಸ್ಸು ಕೊಡಬೇಕು ಎಂಬ ಆಸೆ ಇದ್ದೇ ಇತ್ತು. ಆದರೆ, ಏನು ಕೊಡುವುದು. ರಂಗತಂಡ ಕಟ್ಟುವುದಾ? ನಾಟಕಗಳಲ್ಲಿ ಪುನಃ ಅಭಿನಯಿಸುವುದಾ? ಎಂಬ ಹಲವು ಪ್ರಶ್ನೆಗಳು ಹುಟ್ಟಿಕೊಂಡವು. ಅದೆಲ್ಲಕ್ಕಿಂತ ಹೆಚ್ಚಾಗಿ ಸಮಕಾಲೀನ ಸಾಂಸ್ಖೃತಿಕ ಜಗತ್ತಿನಲ್ಲಿ ಸೃಜನಾತ್ಮಕವಾಗಿ ತೊಡಗಿಕೊಳ್ಳುವ ಹಂಬಲದಿಂದ ಹುಟ್ಟಿಕೊಂಡಿದ್ದು ನಿರ್ದಿಗಂತ’ ಎಂದರು.

ಈ ಸಂಸ್ಥೆಗೆ ನಿರ್ದಿಗಂತ ಎಂಬ ಹೆಸರು ಇಟ್ಟ ಬಗೆ ವಿವರಿಸಿದ ಅವರು, ‘ಇದೊಂದು ರಂಗಭೂಮಿ ಅಥವಾ ನಾಟಕ ಶಾಲೆ ಎನ್ನುವದಕ್ಕಿಂತ ಸಾಹಿತ್ಯ, ಚಿತ್ರಕಲೆ, ನೃತ್ಯ, ಶಿಲ್ಪ ಮೊದಲಾದ ಲಲಿತ ಕಲೆಗಳನ್ನೊಳಗೊಂಡ ಜಾಗ ಎನ್ನಬಹುದು. ಇದಕ್ಕೆ ಏನು ಹೆಸಿರಡಬಹುದು ಎಂದು ಯೋಚಿಸುತ್ತಿದ್ದಾಗ, ಕುವೆಂಪು ಅವರ ಕಾವ್ಯದ ಸಾಲುಗಳಲ್ಲಿ ರೂಪಕವಾಗಿ ಬರುವ ನಿರ್ದಿಗಂತ ಸರಿ ಎನಿಸಿತು. ಹಾಗಾಗಿ, ಈ ಹೆಸರು ಇಟ್ಟಿದ್ದೇವೆ’ ಎಂದರು.

ಪ್ರಕಾಶ್‍ ರೈ ಅವರ ಜೊತೆಗೆ ಡಾ. ಶ್ರೀಪಾದ್‍ ಭಟ್‍, ಶಾಲೋಮ್‍ ಸನ್ನುತ, ಮುನ್ನ ಮೈಸೂರು, ಸುಶ್ಮಿತಾ ಚೈತನ್ಯ, ಅನುಷ್‍ ಶೆಟ್ಟಿ, ಕೃಪಾಕರ ಸೇನಾನಿ ಮುಂತಾದವರು ಈ ಸಂಸ್ಥೆ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಐದು ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಿರುವ ನಿರ್ದಿಗಂತದಲ್ಲಿ ಕಳೆದ ಒಂದು ವರ್ಷದಿಂದ ಹಲವು ಚಟುವಟಿಕೆಗಳು ನಡೆಯುತ್ತಿವೆ.

ಭೂಮಿಕಾ

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago