ಮನರಂಜನೆ

ಪ್ರಕಾಶ್‌ ರಾಜ್‌ ಬಿಜೆಪಿ ಸೇರ್ಪಡೆಯಾಗ್ತಾರೆ? ಹಿಗೊಂದು ಪೋಸ್ಟ್!

ಬೆಂಗಳೂರು: ಖ್ಯಾತ ನಟ ಪ್ರಕಾಶ್‌ ರಾಜ್‌ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳ ಬಗ್ಗೆ ವ್ಯಾಪಕವಾಗಿ ಖಂಡಿಸುತ್ತಾ ಬಂದಿದ್ದಾರೆ.

ಈಗ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಗಾಸಿಪ್‌ ಹಬ್ಬಿದೆ. ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದ ಈ ಗಾಳಿ ಸುದ್ದಿಗೆ ಪ್ರಕಾಶ್‌ ರಾಜ್‌ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ʻಖ್ಯಾತ ನಟ ಪ್ರಕಾಶ್​ ರಾಜ್​ ಅವರು ಇಂದು(ಏಪ್ರಿಲ್‌ 4) ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ಎಕ್ಸ್​ (ಟ್ವಿಟರ್​) ಬಳಕೆದಾರರೊಬ್ಬರು ಪೋಸ್ಟ್​ ಮಾಡಿದ್ದಾರೆ. ಅದಕ್ಕೆ ಪ್ರಕಾಶ್​ ರಾಜ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ʻಜಸ್ಟ್​ ಆಸ್ಕಿಂಗ್​’ ಎಂದು ಪ್ರಕಾಶ್​ ರಾಜ್​ ಟ್ವೀಟ್​ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಯನ್ನು ಕಳೆದ 10 ವರ್ಷಗಳಿಂದಲೂ ಪ್ರಕಾಶ್​ ರಾಜ್​ ಅವರು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್​ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂಬುದನ್ನು ಕೂಡ ಅವರು ಖಂಡಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

6 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

6 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

7 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

8 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

8 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

10 hours ago