ಬೆಂಗಳೂರು: ಖ್ಯಾತ ನಟ ಪ್ರಕಾಶ್ ರಾಜ್ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳ ಬಗ್ಗೆ ವ್ಯಾಪಕವಾಗಿ ಖಂಡಿಸುತ್ತಾ ಬಂದಿದ್ದಾರೆ.
ಈಗ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಗಾಸಿಪ್ ಹಬ್ಬಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಈ ಗಾಳಿ ಸುದ್ದಿಗೆ ಪ್ರಕಾಶ್ ರಾಜ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ʻಖ್ಯಾತ ನಟ ಪ್ರಕಾಶ್ ರಾಜ್ ಅವರು ಇಂದು(ಏಪ್ರಿಲ್ 4) ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ʻಜಸ್ಟ್ ಆಸ್ಕಿಂಗ್’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಯನ್ನು ಕಳೆದ 10 ವರ್ಷಗಳಿಂದಲೂ ಪ್ರಕಾಶ್ ರಾಜ್ ಅವರು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂಬುದನ್ನು ಕೂಡ ಅವರು ಖಂಡಿಸಿದ್ದಾರೆ.
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ…