ಬೆಂಗಳೂರು: ಖ್ಯಾತ ನಟ ಪ್ರಕಾಶ್ ರಾಜ್ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳ ಬಗ್ಗೆ ವ್ಯಾಪಕವಾಗಿ ಖಂಡಿಸುತ್ತಾ ಬಂದಿದ್ದಾರೆ.
ಈಗ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಗಾಸಿಪ್ ಹಬ್ಬಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಈ ಗಾಳಿ ಸುದ್ದಿಗೆ ಪ್ರಕಾಶ್ ರಾಜ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ʻಖ್ಯಾತ ನಟ ಪ್ರಕಾಶ್ ರಾಜ್ ಅವರು ಇಂದು(ಏಪ್ರಿಲ್ 4) ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ʻಜಸ್ಟ್ ಆಸ್ಕಿಂಗ್’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಯನ್ನು ಕಳೆದ 10 ವರ್ಷಗಳಿಂದಲೂ ಪ್ರಕಾಶ್ ರಾಜ್ ಅವರು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂಬುದನ್ನು ಕೂಡ ಅವರು ಖಂಡಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…