ಬೆಂಗಳೂರು: ಖ್ಯಾತ ನಟ ಪ್ರಕಾಶ್ ರಾಜ್ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳ ಬಗ್ಗೆ ವ್ಯಾಪಕವಾಗಿ ಖಂಡಿಸುತ್ತಾ ಬಂದಿದ್ದಾರೆ.
ಈಗ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಗಾಸಿಪ್ ಹಬ್ಬಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಈ ಗಾಳಿ ಸುದ್ದಿಗೆ ಪ್ರಕಾಶ್ ರಾಜ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ʻಖ್ಯಾತ ನಟ ಪ್ರಕಾಶ್ ರಾಜ್ ಅವರು ಇಂದು(ಏಪ್ರಿಲ್ 4) ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ʻಜಸ್ಟ್ ಆಸ್ಕಿಂಗ್’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಯನ್ನು ಕಳೆದ 10 ವರ್ಷಗಳಿಂದಲೂ ಪ್ರಕಾಶ್ ರಾಜ್ ಅವರು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂಬುದನ್ನು ಕೂಡ ಅವರು ಖಂಡಿಸಿದ್ದಾರೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…