ಮನರಂಜನೆ

‘ಲಾಫಿಂಗ್ ಬುದ್ಧ’ನಾಗಿ ಬಂದ್ರು ಪ್ರಮೋದ್‍ ಶೆಟ್ಟಿ …

‘ಲಾಫಿಂಗ್‍ ಬುದ್ಧ’, ‘ಕಾಶಿ ಯಾತ್ರೆ’, ‘ಶಭಾಷ್‍ ಬಡ್ಡಿಮಗ್ನೆ’, ‘ಜಲಂಧರ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ ಪ್ರಮೋದ್‍ ಶೆಟ್ಟಿ. ಆದರೆ, ಯಾವೊಂದು ಚಿತ್ರವೂ ಅದ್ಯಾಕೋ ಬಿಡುಗಡೆಯಾಗುತ್ತಿಲ್ಲ. ಈಗ ಕೊನೆಗೂ ಪ್ರಮೋದ್‍ ಮೊದಲು ನಟಿಸಿದ ‘ಲಾಫಿಂಗ್ ಬುದ್ಧ’ ಚಿತ್ರವು ಮೊದಲು ಬಿಡುಗಡೆಯಾಗುತ್ತಿದೆ.

ಹೌದು, ‘ಲಾಫಿಂಗ್‍ ಬುದ್ಧ’ ಚಿತ್ರವು ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರಕ್ಕಾಗಿ ಕೆ. ಕಲ್ಯಾಣ್‍ ಬರೆದಿರುವ ‘ಎಂಥಾ ಚಂದಾನೇ ಇವಳು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

‘ಲಾಫಿಂಗ್ ಬುದ್ಧ’ ಚಿತ್ರವನ್ನು ರಿಷಭ್‍ ಶೆಟ್ಟಿ ನಿರ್ಮಿಸುತ್ತಿದ್ದು, ‘ಹೀರೋ’ ನಿರ್ದೇಶಿಸಿದ್ದ ಭರತ್‍ ರಾಜ್ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಪ್ರಮೋದ್‍, ‘ಒಂದಿನ ಇದ್ದಕ್ಕಿದ್ದಂತೆ ರಿಷಭ್ ಮತ್ತು ಭರತ್‍ ರಾಜ್ ಕರೆಸಿಕೊಂಡು, ಈ ಚಿತ್ರಕ್ಕೆ ನೀನೇ ಹೀರೋ ಎಂದರು. ಯಾವ ನಂಬಿಕೆ ಮೇಲೆ ನನ್ನನ್ನು ಹೀರೋ ಮಾಡ್ತಿದ್ದೀರಾ ಎಂದು ಕೇಳಿದೆ. ಅದಕ್ಕೆ ರಿಷಭ್, ಕುಂದಾಪುರದ ಬೈಗಳುವನ್ನು ಸೇರಿಸಿ, ‘ನಿನಗಲ್ಲ ದುಡ್ಡು ಹಾಕ್ತಿರೋದು, ದುಡ್ಡು ಹಾಕ್ತಿರೋದು ಕಥೆಗೆ’ ಅಂದ. ಅದಾದ ಮೇಲೆ ತೂಕ ಏರಿಸಬೇಕಿತ್ತು. ಈ ಚಿತ್ರಕ್ಕಾಗಿ 30 ಕೆಜಿ ಏರಿಸಿಕೊಂಡು, ಕೊನೆಗೆ 23 ಕೆ.ಜಿ ಇಳಿಸಿದ್ದೇನೆ. ಪೊಲೀಸರ ಮೇಲೆ ತುಂಬಾ ಒತ್ತಡ ಇರುತ್ತದೆ. ಅದನ್ನೆಲ್ಲಾ ಬಿಟ್ಟು ಮನೆಗೆ ಹೋಗಬೇಕು. ಅದನ್ನೆಲ್ಲಾ ನೋಡಿದರೆ ಅವರ ಮೇಲೆ ಕನಿಕರ ಬರುತ್ತದೆ. ಹಾಗಾಗಿ, ಇದೊಂದು ಸವಾಲಿನ ಪಾತ್ರ ಅಂತನಿಸಿತು ಒಪ್ಪಿಕೊಂಡೆ’ ಎಂದರು ಪ್ರಮೋದ್ ‍ಶೆಟ್ಟಿ.

ಈ ಹಿಂದೆ ರಿಷಭ್‍ ಶೆಟ್ಟಿ ಅಭಿನಯದ ‘ಹೀರೋ’ ಚಿತ್ರವನ್ನು ನಿರ್ದೇಶಿಸಿದ್ದ ಭರತ್‍ ರಾಜ್‍, ‘ಲಾಫಿಂಗ್‍ ಬುದ್ಧ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮೊದಲು ಜನಪ್ರಿಯ ಸಾಹಿತಿ ಜೋಗಿ ಅವರ ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ’ ಕಥೆಯನ್ನು ಚಿತ್ರ ಮಾಡಬೇಕು ಅಂದುಕೊಂಡಿದ್ದರಂತೆ. ‘ಆದರೆ, ಅದೊಂದು ಸ್ವಗತವಾಗಿತ್ತು. ಈ ಮಧ್ಯೆ, ಹಿಮಾಚಲ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಯೂಟ್ಯೂಬ್‍ನಲ್ಲಿ ನೋಡಿದೆ. ಪೊಲೀಸ್‍ ಪೇದೆಯೊಬ್ಬ ತನ್ನ ಎಸ್‍.ಪಿ ಬೈದರು ಎಂಬ ಕಾರಣಕ್ಕೆ ಅಳುತ್ತಿದ್ದ ಘಟನೆ ಅದಾಗಿತ್ತು. ಆಗ ಈ ಕಥೆ ಹುಟ್ಟಿತು. ಪೊಲೀಸರ ಕುರಿತು ಹಲವು ಚಿತ್ರಗಳು ಬಂದಿವೆ. ಆದರೆ, ಇದು ಅವರ ವೈಯಕ್ತಿಕ ವಿಚಾರದ ಕುರಿತಾದ ಚಿತ್ರ. ಗೋವರ್ಧನ್‍ ಎಂಬ ಹೆಡ್‍ ಕಾನ್‍ಸ್ಟಬಲ್‍ ಕುರಿತು ಚಿತ್ರ ಸಾಗುತ್ತದೆ. ಈ ಹಾಡಿನಿಂದ ಮೂರು ಜನರ ಬದುಕಿನಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ ಎಂಬುದೇ ಚಿತ್ರದ ಕಥೆ’ ಎಂದರು.

‘ಲಾಫಿಂಗ್ ಬುದ್ಧ’ ಚಿತ್ರದಲ್ಲಿ ನಾಯಕಿಯಾಗಿ ‘ಗಂಟುಮೂಟೆ’ ಖ್ಯಾತಿಯ ತೇಜು ಬೆಳವಾಡಿ ನಟಿಸಿದ್ದಾರೆ. ದಿಗಂತ್‍ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಎಸ್‍.ಕೆ. ಉಮೇಶ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ವಿಷ್ಣು ವಿಜಯ್‍ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ರಿಷಭ್‍ ಶೆಟ್ಟಿ ಫಿಲಂಸ್‍ ಸಂಸ್ಥೆಯಡಿ ರಿಷಭ್‍ ಶೆಟ್ಟಿ ನಿರ್ಮಿಸಿದ್ದು, ಆಗಸ್ಟ್ 15ರಂದು ಟ್ರೇಲರ್‍ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

1 hour ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

4 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

5 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

8 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

8 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

14 hours ago