ಮನರಂಜನೆ

‘ಲಾಫಿಂಗ್ ಬುದ್ಧ’ನಾಗಿ ಬಂದ್ರು ಪ್ರಮೋದ್‍ ಶೆಟ್ಟಿ …

‘ಲಾಫಿಂಗ್‍ ಬುದ್ಧ’, ‘ಕಾಶಿ ಯಾತ್ರೆ’, ‘ಶಭಾಷ್‍ ಬಡ್ಡಿಮಗ್ನೆ’, ‘ಜಲಂಧರ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ ಪ್ರಮೋದ್‍ ಶೆಟ್ಟಿ. ಆದರೆ, ಯಾವೊಂದು ಚಿತ್ರವೂ ಅದ್ಯಾಕೋ ಬಿಡುಗಡೆಯಾಗುತ್ತಿಲ್ಲ. ಈಗ ಕೊನೆಗೂ ಪ್ರಮೋದ್‍ ಮೊದಲು ನಟಿಸಿದ ‘ಲಾಫಿಂಗ್ ಬುದ್ಧ’ ಚಿತ್ರವು ಮೊದಲು ಬಿಡುಗಡೆಯಾಗುತ್ತಿದೆ.

ಹೌದು, ‘ಲಾಫಿಂಗ್‍ ಬುದ್ಧ’ ಚಿತ್ರವು ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರಕ್ಕಾಗಿ ಕೆ. ಕಲ್ಯಾಣ್‍ ಬರೆದಿರುವ ‘ಎಂಥಾ ಚಂದಾನೇ ಇವಳು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

‘ಲಾಫಿಂಗ್ ಬುದ್ಧ’ ಚಿತ್ರವನ್ನು ರಿಷಭ್‍ ಶೆಟ್ಟಿ ನಿರ್ಮಿಸುತ್ತಿದ್ದು, ‘ಹೀರೋ’ ನಿರ್ದೇಶಿಸಿದ್ದ ಭರತ್‍ ರಾಜ್ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಪ್ರಮೋದ್‍, ‘ಒಂದಿನ ಇದ್ದಕ್ಕಿದ್ದಂತೆ ರಿಷಭ್ ಮತ್ತು ಭರತ್‍ ರಾಜ್ ಕರೆಸಿಕೊಂಡು, ಈ ಚಿತ್ರಕ್ಕೆ ನೀನೇ ಹೀರೋ ಎಂದರು. ಯಾವ ನಂಬಿಕೆ ಮೇಲೆ ನನ್ನನ್ನು ಹೀರೋ ಮಾಡ್ತಿದ್ದೀರಾ ಎಂದು ಕೇಳಿದೆ. ಅದಕ್ಕೆ ರಿಷಭ್, ಕುಂದಾಪುರದ ಬೈಗಳುವನ್ನು ಸೇರಿಸಿ, ‘ನಿನಗಲ್ಲ ದುಡ್ಡು ಹಾಕ್ತಿರೋದು, ದುಡ್ಡು ಹಾಕ್ತಿರೋದು ಕಥೆಗೆ’ ಅಂದ. ಅದಾದ ಮೇಲೆ ತೂಕ ಏರಿಸಬೇಕಿತ್ತು. ಈ ಚಿತ್ರಕ್ಕಾಗಿ 30 ಕೆಜಿ ಏರಿಸಿಕೊಂಡು, ಕೊನೆಗೆ 23 ಕೆ.ಜಿ ಇಳಿಸಿದ್ದೇನೆ. ಪೊಲೀಸರ ಮೇಲೆ ತುಂಬಾ ಒತ್ತಡ ಇರುತ್ತದೆ. ಅದನ್ನೆಲ್ಲಾ ಬಿಟ್ಟು ಮನೆಗೆ ಹೋಗಬೇಕು. ಅದನ್ನೆಲ್ಲಾ ನೋಡಿದರೆ ಅವರ ಮೇಲೆ ಕನಿಕರ ಬರುತ್ತದೆ. ಹಾಗಾಗಿ, ಇದೊಂದು ಸವಾಲಿನ ಪಾತ್ರ ಅಂತನಿಸಿತು ಒಪ್ಪಿಕೊಂಡೆ’ ಎಂದರು ಪ್ರಮೋದ್ ‍ಶೆಟ್ಟಿ.

ಈ ಹಿಂದೆ ರಿಷಭ್‍ ಶೆಟ್ಟಿ ಅಭಿನಯದ ‘ಹೀರೋ’ ಚಿತ್ರವನ್ನು ನಿರ್ದೇಶಿಸಿದ್ದ ಭರತ್‍ ರಾಜ್‍, ‘ಲಾಫಿಂಗ್‍ ಬುದ್ಧ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮೊದಲು ಜನಪ್ರಿಯ ಸಾಹಿತಿ ಜೋಗಿ ಅವರ ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ’ ಕಥೆಯನ್ನು ಚಿತ್ರ ಮಾಡಬೇಕು ಅಂದುಕೊಂಡಿದ್ದರಂತೆ. ‘ಆದರೆ, ಅದೊಂದು ಸ್ವಗತವಾಗಿತ್ತು. ಈ ಮಧ್ಯೆ, ಹಿಮಾಚಲ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಯೂಟ್ಯೂಬ್‍ನಲ್ಲಿ ನೋಡಿದೆ. ಪೊಲೀಸ್‍ ಪೇದೆಯೊಬ್ಬ ತನ್ನ ಎಸ್‍.ಪಿ ಬೈದರು ಎಂಬ ಕಾರಣಕ್ಕೆ ಅಳುತ್ತಿದ್ದ ಘಟನೆ ಅದಾಗಿತ್ತು. ಆಗ ಈ ಕಥೆ ಹುಟ್ಟಿತು. ಪೊಲೀಸರ ಕುರಿತು ಹಲವು ಚಿತ್ರಗಳು ಬಂದಿವೆ. ಆದರೆ, ಇದು ಅವರ ವೈಯಕ್ತಿಕ ವಿಚಾರದ ಕುರಿತಾದ ಚಿತ್ರ. ಗೋವರ್ಧನ್‍ ಎಂಬ ಹೆಡ್‍ ಕಾನ್‍ಸ್ಟಬಲ್‍ ಕುರಿತು ಚಿತ್ರ ಸಾಗುತ್ತದೆ. ಈ ಹಾಡಿನಿಂದ ಮೂರು ಜನರ ಬದುಕಿನಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ ಎಂಬುದೇ ಚಿತ್ರದ ಕಥೆ’ ಎಂದರು.

‘ಲಾಫಿಂಗ್ ಬುದ್ಧ’ ಚಿತ್ರದಲ್ಲಿ ನಾಯಕಿಯಾಗಿ ‘ಗಂಟುಮೂಟೆ’ ಖ್ಯಾತಿಯ ತೇಜು ಬೆಳವಾಡಿ ನಟಿಸಿದ್ದಾರೆ. ದಿಗಂತ್‍ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಎಸ್‍.ಕೆ. ಉಮೇಶ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ವಿಷ್ಣು ವಿಜಯ್‍ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ರಿಷಭ್‍ ಶೆಟ್ಟಿ ಫಿಲಂಸ್‍ ಸಂಸ್ಥೆಯಡಿ ರಿಷಭ್‍ ಶೆಟ್ಟಿ ನಿರ್ಮಿಸಿದ್ದು, ಆಗಸ್ಟ್ 15ರಂದು ಟ್ರೇಲರ್‍ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 seconds ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

1 hour ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago