ಮನರಂಜನೆ

‘ಲಾಫಿಂಗ್ ಬುದ್ಧ’ನಾಗಿ ಬಂದ್ರು ಪ್ರಮೋದ್‍ ಶೆಟ್ಟಿ …

‘ಲಾಫಿಂಗ್‍ ಬುದ್ಧ’, ‘ಕಾಶಿ ಯಾತ್ರೆ’, ‘ಶಭಾಷ್‍ ಬಡ್ಡಿಮಗ್ನೆ’, ‘ಜಲಂಧರ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ ಪ್ರಮೋದ್‍ ಶೆಟ್ಟಿ. ಆದರೆ, ಯಾವೊಂದು ಚಿತ್ರವೂ ಅದ್ಯಾಕೋ ಬಿಡುಗಡೆಯಾಗುತ್ತಿಲ್ಲ. ಈಗ ಕೊನೆಗೂ ಪ್ರಮೋದ್‍ ಮೊದಲು ನಟಿಸಿದ ‘ಲಾಫಿಂಗ್ ಬುದ್ಧ’ ಚಿತ್ರವು ಮೊದಲು ಬಿಡುಗಡೆಯಾಗುತ್ತಿದೆ.

ಹೌದು, ‘ಲಾಫಿಂಗ್‍ ಬುದ್ಧ’ ಚಿತ್ರವು ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರಕ್ಕಾಗಿ ಕೆ. ಕಲ್ಯಾಣ್‍ ಬರೆದಿರುವ ‘ಎಂಥಾ ಚಂದಾನೇ ಇವಳು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

‘ಲಾಫಿಂಗ್ ಬುದ್ಧ’ ಚಿತ್ರವನ್ನು ರಿಷಭ್‍ ಶೆಟ್ಟಿ ನಿರ್ಮಿಸುತ್ತಿದ್ದು, ‘ಹೀರೋ’ ನಿರ್ದೇಶಿಸಿದ್ದ ಭರತ್‍ ರಾಜ್ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಪ್ರಮೋದ್‍, ‘ಒಂದಿನ ಇದ್ದಕ್ಕಿದ್ದಂತೆ ರಿಷಭ್ ಮತ್ತು ಭರತ್‍ ರಾಜ್ ಕರೆಸಿಕೊಂಡು, ಈ ಚಿತ್ರಕ್ಕೆ ನೀನೇ ಹೀರೋ ಎಂದರು. ಯಾವ ನಂಬಿಕೆ ಮೇಲೆ ನನ್ನನ್ನು ಹೀರೋ ಮಾಡ್ತಿದ್ದೀರಾ ಎಂದು ಕೇಳಿದೆ. ಅದಕ್ಕೆ ರಿಷಭ್, ಕುಂದಾಪುರದ ಬೈಗಳುವನ್ನು ಸೇರಿಸಿ, ‘ನಿನಗಲ್ಲ ದುಡ್ಡು ಹಾಕ್ತಿರೋದು, ದುಡ್ಡು ಹಾಕ್ತಿರೋದು ಕಥೆಗೆ’ ಅಂದ. ಅದಾದ ಮೇಲೆ ತೂಕ ಏರಿಸಬೇಕಿತ್ತು. ಈ ಚಿತ್ರಕ್ಕಾಗಿ 30 ಕೆಜಿ ಏರಿಸಿಕೊಂಡು, ಕೊನೆಗೆ 23 ಕೆ.ಜಿ ಇಳಿಸಿದ್ದೇನೆ. ಪೊಲೀಸರ ಮೇಲೆ ತುಂಬಾ ಒತ್ತಡ ಇರುತ್ತದೆ. ಅದನ್ನೆಲ್ಲಾ ಬಿಟ್ಟು ಮನೆಗೆ ಹೋಗಬೇಕು. ಅದನ್ನೆಲ್ಲಾ ನೋಡಿದರೆ ಅವರ ಮೇಲೆ ಕನಿಕರ ಬರುತ್ತದೆ. ಹಾಗಾಗಿ, ಇದೊಂದು ಸವಾಲಿನ ಪಾತ್ರ ಅಂತನಿಸಿತು ಒಪ್ಪಿಕೊಂಡೆ’ ಎಂದರು ಪ್ರಮೋದ್ ‍ಶೆಟ್ಟಿ.

ಈ ಹಿಂದೆ ರಿಷಭ್‍ ಶೆಟ್ಟಿ ಅಭಿನಯದ ‘ಹೀರೋ’ ಚಿತ್ರವನ್ನು ನಿರ್ದೇಶಿಸಿದ್ದ ಭರತ್‍ ರಾಜ್‍, ‘ಲಾಫಿಂಗ್‍ ಬುದ್ಧ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮೊದಲು ಜನಪ್ರಿಯ ಸಾಹಿತಿ ಜೋಗಿ ಅವರ ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ’ ಕಥೆಯನ್ನು ಚಿತ್ರ ಮಾಡಬೇಕು ಅಂದುಕೊಂಡಿದ್ದರಂತೆ. ‘ಆದರೆ, ಅದೊಂದು ಸ್ವಗತವಾಗಿತ್ತು. ಈ ಮಧ್ಯೆ, ಹಿಮಾಚಲ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಯೂಟ್ಯೂಬ್‍ನಲ್ಲಿ ನೋಡಿದೆ. ಪೊಲೀಸ್‍ ಪೇದೆಯೊಬ್ಬ ತನ್ನ ಎಸ್‍.ಪಿ ಬೈದರು ಎಂಬ ಕಾರಣಕ್ಕೆ ಅಳುತ್ತಿದ್ದ ಘಟನೆ ಅದಾಗಿತ್ತು. ಆಗ ಈ ಕಥೆ ಹುಟ್ಟಿತು. ಪೊಲೀಸರ ಕುರಿತು ಹಲವು ಚಿತ್ರಗಳು ಬಂದಿವೆ. ಆದರೆ, ಇದು ಅವರ ವೈಯಕ್ತಿಕ ವಿಚಾರದ ಕುರಿತಾದ ಚಿತ್ರ. ಗೋವರ್ಧನ್‍ ಎಂಬ ಹೆಡ್‍ ಕಾನ್‍ಸ್ಟಬಲ್‍ ಕುರಿತು ಚಿತ್ರ ಸಾಗುತ್ತದೆ. ಈ ಹಾಡಿನಿಂದ ಮೂರು ಜನರ ಬದುಕಿನಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ ಎಂಬುದೇ ಚಿತ್ರದ ಕಥೆ’ ಎಂದರು.

‘ಲಾಫಿಂಗ್ ಬುದ್ಧ’ ಚಿತ್ರದಲ್ಲಿ ನಾಯಕಿಯಾಗಿ ‘ಗಂಟುಮೂಟೆ’ ಖ್ಯಾತಿಯ ತೇಜು ಬೆಳವಾಡಿ ನಟಿಸಿದ್ದಾರೆ. ದಿಗಂತ್‍ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಎಸ್‍.ಕೆ. ಉಮೇಶ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ವಿಷ್ಣು ವಿಜಯ್‍ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ರಿಷಭ್‍ ಶೆಟ್ಟಿ ಫಿಲಂಸ್‍ ಸಂಸ್ಥೆಯಡಿ ರಿಷಭ್‍ ಶೆಟ್ಟಿ ನಿರ್ಮಿಸಿದ್ದು, ಆಗಸ್ಟ್ 15ರಂದು ಟ್ರೇಲರ್‍ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago