ಮನರಂಜನೆ

ARM ಟ್ರೈಲರ್ ಮೆಚ್ಚಿದ ಪ್ರಶಾಂತ್ ನೀಲ್

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌,  “ಎಆರ್‌ಎಂ” ಸಿನಿಮಾದ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರಿಗೆ ಪ್ರದರ್ಶಿಸಿದರು.

ಹೊಂಬಾಳೆ ಫಿಲಂಸ್ ಕಚೇರಿಯಲ್ಲಿ ಟ್ರೈಲರ್ ವೀಕ್ಷಣೆ ಮಾಡಿದ ಪ್ರಶಾಂತ್ ನೀಲ್ ಅವರು ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶಾಂತ್ ನೀಲ್  ಚಿತ್ರತಂಡಕ್ಕೆ ಅವರು ಶುಭ ಕೋರಿದರು.
ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್  ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.
ಸುಜಿತ್ ನಂಬಿಯಾರ್ಚಿ  ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

 

andolana

Recent Posts

ಹನೂರಿನ ಮೊರಾರ್ಜಿ ದೇಸಾಯಿ ಮಾದರಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಹನೂರು : ನನ್ನ ವೈಯಕ್ತಿಕ ಜೀವನದಲ್ಲಿ ಇದೊಂದು ಅಮೋಘ ದಿನವಾಗಲಿದೆ ಇಂತಹ ವಿದ್ಯಾರ್ಥಿಗಳನ್ನು ಪಡೆದ ನಾವೇ ಧನ್ಯರು ಎಂದು ನಂಜನಗೂಡು…

2 hours ago

ಅಕ್ರಮ ನಾಡ ಬಂದೂಕು ಶೇಖರಿಸಿದ್ದ ವ್ಯಕ್ತಿಯ ಬಂಧನ

ಹನೂರು: ಅಕ್ರಮ ನಾಡ ಬಂದೂಕು ಶೇಖರಣೆ ಮಾಡಿಟ್ಟುಕೊಂಡಿದ್ದ ವ್ಯಕ್ತಿಯನ್ನು ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ…

2 hours ago

ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೂಮಿ ಪೂಜೆ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕ ಸಮುದಾಯದ ಬಡಾವಣೆಯಲ್ಲಿ ನೂತನವಾಗಿ ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಲು ಮಾಜಿ ಶಾಸಕ…

2 hours ago

ಹಸೆಮಣೆ ಏರಿದ ತಮಿಳು ನಟ ಸಿದ್ದಾರ್ಥ ಹಾಗೂ ಅದಿತಿ ರಾವ್‌ ಹೈದರಿ

ತಮಿಳುನಾಡು: ತಮಿಳು ಸ್ಟಾರ್‌ ನಟ ಸಿದ್ಧಾರ್ಥ್‌ ಹಾಗೂ ಅದಿತಿ ರಾವ್‌ ಹೈದರಿ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದಿತಿ ಹಾಗೂ…

2 hours ago

ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ…

2 hours ago

ಮಂಕಿಪಾಕ್ಸ್‌ ಭೀತಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್‌ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ…

3 hours ago