ಮನರಂಜನೆ

ARM ಟ್ರೈಲರ್ ಮೆಚ್ಚಿದ ಪ್ರಶಾಂತ್ ನೀಲ್

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌,  “ಎಆರ್‌ಎಂ” ಸಿನಿಮಾದ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರಿಗೆ ಪ್ರದರ್ಶಿಸಿದರು.

ಹೊಂಬಾಳೆ ಫಿಲಂಸ್ ಕಚೇರಿಯಲ್ಲಿ ಟ್ರೈಲರ್ ವೀಕ್ಷಣೆ ಮಾಡಿದ ಪ್ರಶಾಂತ್ ನೀಲ್ ಅವರು ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶಾಂತ್ ನೀಲ್  ಚಿತ್ರತಂಡಕ್ಕೆ ಅವರು ಶುಭ ಕೋರಿದರು.
ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್  ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.
ಸುಜಿತ್ ನಂಬಿಯಾರ್ಚಿ  ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago