ಬಹು ನಿರೀಕ್ಷಿತಾ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್ಟಿಆರ್ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು.
ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್ಟಿಆರ್ ಅವರು ಪ್ರಶಾಂತ್ ನೀಲ್ ಜೊತೆಯಲ್ಲಿ ಮುಂದಿನ ಚಿತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದರಂತೆ ಇಂದು ಮುಹೂರ್ತ ಕೂಡಾ ನಡೆದಿದೆ.
ಹೈದರಾಬಾದಿನ ರಾಮನಾಯ್ಡು ಸ್ಟುಡಿಯೋದಲ್ಲಿ ಜೂ. ಎನ್ಟಿಆರ್ ಅವರ 31ನೇ ಚಿತ್ರಕ್ಕೆ ಚಾಲನೆ ಸಿಕ್ಕಿತು. ಬಹಳ ಸರಳವಾಗಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಎನ್ಟಿಆರ್ ಸಹೋದರ ಕಲ್ಯಾಣ್ ರಾಮ್, ನಿರ್ದೇಶಕ ಪ್ರಶಾಂತ್ ನೀಲ್, ಅವರ ಕುಟುಂಬದವರಷ್ಟೇ ಭಾಗಿಯಾಗಿದ್ದರು.
ಮೈತ್ರಿ ಮೂವೀಸ್ ಮೇಕರ್ ಈ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿರಲಿದ್ದಾರೆ ಎಂದು ಊಹಿಸಲಾಗಿದೆ. ಇನ್ನು ಈ ಚಿತ್ರ 2026ರ ಜನವರಿ 9 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದ್ದು, ಇನ್ನಷ್ಟೆ ಮಾಹಿತಿಯನ್ನು ಚಿತ್ರತಂಡ ಬಿಡುಗಡೆಗೊಳಿಸಬೇಕಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…