ಬಹು ನಿರೀಕ್ಷಿತಾ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್ಟಿಆರ್ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು.
ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್ಟಿಆರ್ ಅವರು ಪ್ರಶಾಂತ್ ನೀಲ್ ಜೊತೆಯಲ್ಲಿ ಮುಂದಿನ ಚಿತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದರಂತೆ ಇಂದು ಮುಹೂರ್ತ ಕೂಡಾ ನಡೆದಿದೆ.
ಹೈದರಾಬಾದಿನ ರಾಮನಾಯ್ಡು ಸ್ಟುಡಿಯೋದಲ್ಲಿ ಜೂ. ಎನ್ಟಿಆರ್ ಅವರ 31ನೇ ಚಿತ್ರಕ್ಕೆ ಚಾಲನೆ ಸಿಕ್ಕಿತು. ಬಹಳ ಸರಳವಾಗಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಎನ್ಟಿಆರ್ ಸಹೋದರ ಕಲ್ಯಾಣ್ ರಾಮ್, ನಿರ್ದೇಶಕ ಪ್ರಶಾಂತ್ ನೀಲ್, ಅವರ ಕುಟುಂಬದವರಷ್ಟೇ ಭಾಗಿಯಾಗಿದ್ದರು.
ಮೈತ್ರಿ ಮೂವೀಸ್ ಮೇಕರ್ ಈ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿರಲಿದ್ದಾರೆ ಎಂದು ಊಹಿಸಲಾಗಿದೆ. ಇನ್ನು ಈ ಚಿತ್ರ 2026ರ ಜನವರಿ 9 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದ್ದು, ಇನ್ನಷ್ಟೆ ಮಾಹಿತಿಯನ್ನು ಚಿತ್ರತಂಡ ಬಿಡುಗಡೆಗೊಳಿಸಬೇಕಿದೆ.
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…